ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

ಉಗ್ರರು ವಿನಾಶಕಾರಿ ಚಟುವಟಿಕೆ ನಡೆಸುತ್ತಿದ್ದರೆ ಭಾರತ ಅದನ್ನು ಸಹಿಸುವುದಿಲ್ಲ: ರಕ್ಷಣಾ ಸಚಿವೆ

ಗಡಿಯಲ್ಲಿ ಉಗ್ರರು ವಿನಾಶಕಾರಿ ಚಟುವಟಿಕೆಗಳನ್ನು ನಡೆಸುತ್ತಿದ್ದರೆ, ಭಾರತ ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ...

ನವದೆಹಲಿ: ಗಡಿಯಲ್ಲಿ ಉಗ್ರರು ವಿನಾಶಕಾರಿ ಚಟುವಟಿಕೆಗಳನ್ನು ನಡೆಸುತ್ತಿದ್ದರೆ, ಭಾರತ ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. 
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಅಡಗು ತಾಣಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿಗೆ ಎರಡು ವರ್ಷಗಳಾಗಿರುವ ಹಿನ್ನಲೆಯಲ್ಲಿ ಮಾತನಾಡಿರುವ ಅವರು, ಗಡಿಯಲ್ಲಿ ಉಗ್ರರು ವಿನಾಶಕಾರಿ ಚಟುವಟಿಕೆಗಳನ್ನು ನಡೆಸುತ್ತಿದ್ದರೆ, ಅದನ್ನು ಭಾರತ ಎಂದಿಗೂ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತೇವೆ. ಉಗ್ರರ ವಿಧ್ವಂಸಕ ಕೃತ್ಯಗಳನ್ನು ಕೈಕಟ್ಟಿಕೊಂಡು ಕುಳಿತು ನೋಡುವುದಿಲ್ಲ. ಉಗ್ರರಿಗೆ ಬೆಂಬಲ ನೀಡುತ್ತಿರುವವರನ್ನು ಶಿಕ್ಷಿಸಲಾಗುತ್ತದೆ ಎಂದು ಹೇಳಿದ್ದಾರೆ. 
ಭಾರತೀಯ ಯೋಧರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ. ಸೀಮಿತ ದಾಳಿ ನಡೆಸಿ 2 ವರ್ಷಗಳಾಗಿದ್ದು, ಇದರ ಆಚರಣೆ ಮಾಡುತ್ತಿದ್ದೇವೆ. ಏಕೆಂದರೆ, ನಮ್ಮ ಭಾರತೀಯ ಯೋಧರ ತ್ಯಾಗ ಹಾಗೂ ಬಲಿದಾನ ಜನರಿಗೆ ತಿಳಿಯಬೇಕು. ಸೀಮಿತ ದಾಳಿ ಮೂಲಕ ಶತ್ರುಗಳಿಗೆ ಹೊಡೆತ ನೀಡಿದ್ದೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT