ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

ಉಗ್ರರು ವಿನಾಶಕಾರಿ ಚಟುವಟಿಕೆ ನಡೆಸುತ್ತಿದ್ದರೆ ಭಾರತ ಅದನ್ನು ಸಹಿಸುವುದಿಲ್ಲ: ರಕ್ಷಣಾ ಸಚಿವೆ

ಗಡಿಯಲ್ಲಿ ಉಗ್ರರು ವಿನಾಶಕಾರಿ ಚಟುವಟಿಕೆಗಳನ್ನು ನಡೆಸುತ್ತಿದ್ದರೆ, ಭಾರತ ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ...

ನವದೆಹಲಿ: ಗಡಿಯಲ್ಲಿ ಉಗ್ರರು ವಿನಾಶಕಾರಿ ಚಟುವಟಿಕೆಗಳನ್ನು ನಡೆಸುತ್ತಿದ್ದರೆ, ಭಾರತ ಅದನ್ನು ಎಂದಿಗೂ ಸಹಿಸುವುದಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. 
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಅಡಗು ತಾಣಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿಗೆ ಎರಡು ವರ್ಷಗಳಾಗಿರುವ ಹಿನ್ನಲೆಯಲ್ಲಿ ಮಾತನಾಡಿರುವ ಅವರು, ಗಡಿಯಲ್ಲಿ ಉಗ್ರರು ವಿನಾಶಕಾರಿ ಚಟುವಟಿಕೆಗಳನ್ನು ನಡೆಸುತ್ತಿದ್ದರೆ, ಅದನ್ನು ಭಾರತ ಎಂದಿಗೂ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತೇವೆ. ಉಗ್ರರ ವಿಧ್ವಂಸಕ ಕೃತ್ಯಗಳನ್ನು ಕೈಕಟ್ಟಿಕೊಂಡು ಕುಳಿತು ನೋಡುವುದಿಲ್ಲ. ಉಗ್ರರಿಗೆ ಬೆಂಬಲ ನೀಡುತ್ತಿರುವವರನ್ನು ಶಿಕ್ಷಿಸಲಾಗುತ್ತದೆ ಎಂದು ಹೇಳಿದ್ದಾರೆ. 
ಭಾರತೀಯ ಯೋಧರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ. ಸೀಮಿತ ದಾಳಿ ನಡೆಸಿ 2 ವರ್ಷಗಳಾಗಿದ್ದು, ಇದರ ಆಚರಣೆ ಮಾಡುತ್ತಿದ್ದೇವೆ. ಏಕೆಂದರೆ, ನಮ್ಮ ಭಾರತೀಯ ಯೋಧರ ತ್ಯಾಗ ಹಾಗೂ ಬಲಿದಾನ ಜನರಿಗೆ ತಿಳಿಯಬೇಕು. ಸೀಮಿತ ದಾಳಿ ಮೂಲಕ ಶತ್ರುಗಳಿಗೆ ಹೊಡೆತ ನೀಡಿದ್ದೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT