ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 
ದೇಶ

ಮೋದಿ ಜನಪ್ರಿಯತೆ ಕಂಡು ಕೇಜ್ರಿವಾಲ್ ಯಾವುದೇ ಆರೋಗ್ಯ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ: ಅಮಿತ್ ಶಾ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನಪ್ರಿಯತೆಯನ್ನು ಕಂಡು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಯಾವುದೇ ಆರೋಗ್ಯ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನಪ್ರಿಯತೆಯನ್ನು ಕಂಡು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಯಾವುದೇ ಆರೋಗ್ಯ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ. 
ಕೇಂದ್ರೀಯ ದೆಹಲಿಯ ಕರೋಲ್ ಬಾಘ್ ಪ್ರದೇಶದಲ್ಲಿ ಪಕ್ಷದ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ವಿರುದ್ಧ ತೀವ್ರವಾಗಿ ಕಿಡಿಕಾರಿದರು. 
ಕೆಟ್ಟ ರಾಜಕೀಯ ಮಾಡುವ ಮೂಲಕ ಕೇಜ್ರಿವಾಲ್ ಸರ್ಕಾರ ದೆಹಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಳ್ಳುವಂತೆ ಮಾಡುತ್ತಿದೆ. ದೆಹಲಿ ಸರ್ಕಾರ ಅಸಹಕಾರ ಚಳುವಳಿಯನ್ನು ಆರಂಭಿಸಿತ್ತು. ಮಹಾತ್ಮಗಾಂಧಿಯಿಂದ ಅವರು ಪ್ರೇರಣೆ ಪಡೆದುಕೊಂಡಿರಬಹುದು ಆದರೆ, ಅವರಿಗೆ ಇದು ಬ್ರಿಟೀಷರ ಸರ್ಕಾರವಲ್ಲ, ದೇಶಪ್ರೇಮಿ ಮೋದಿ ಸರ್ಕಾರ ಕೇಂದ್ರದಲ್ಲಿದೆ ಎಂಬುದು ತಿಳಿದಿಲ್ಲ ಎಂದು ಹೇಳಿದ್ದಾರೆ. 
ಆಯುಷ್ಮಾನ್ ಭಾರತ್ ಯೋಜನೆ ನಗರದಲ್ಲಿ ಜಾರಿಗೊಳಿಸು ಸಾಧ್ಯವಾಗಿಲ್ಲವೇಕೆ? ಅದಕ್ಕೆ ಕಾರಣವೇನು?... ದೆಹಲಿಯ ಒಂದೂವರೆ ಕೋಟಿ ಜವರು ಆರೋಗ್ಯ ಸೇವೆ ಯೋಜನೆಯ ಲಾಭದಿಂದ ವಂಚಿರಾಗುವಂತೆ ಕೇಜ್ರಿವಾಲ್ ಮಾಡಿದ್ದಾರೆ. ಕೇಜ್ರಿವಾಲ್ ವೋಟ್ ಬ್ಯಾಂಕ್ ನಿಂದಾಗಿ ಜನರಿಗೆ ಯೋಜನೆಯ ಲಾಭ ತಲುಪುತ್ತಿಲ್ಲ. 
ಮೊಹಲ್ಲಾ ಕ್ಲಿನಿಕ್ ಗಳನ್ನು ತೆರೆದಿದ್ದೇವೆಂದು ಕಾರಣಗಳನ್ನು ನೀಡುತ್ತಿದ್ದಾರೆ. ಆದರೆ, ಆ ಕ್ಲಿನಿಕ್ ಗಳು ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ, ಹೃದಯಕ್ಕೆ ಶಸ್ತ್ರಚಿಕಿತ್ಸೆಗಳನ್ನು ನಡೆಸುತ್ತವೆಯೇ? ಕೇಜ್ರಿವಾಲ್ ಮೊದಲು ಮೊಹಲ್ಲಾದಲ್ಲಿ ಚಿಕಿತ್ಸೆ ಪಡೆದುಕೊಂಡು ನೋಡಬೇಕು. ನಂತರವಷ್ಟೇ ಅವರಿಗೆ ನೈಜತೆ ತಿಳಿಯಲಿದೆ. 2019ರ ಚುನಾವಣೆಯಲ್ಲಿ ಜನತೆ ಕೇಜ್ರಿವಾಲ್ ಅವರಿಗೆ ಬುದ್ಧಿ ಕಲಿಸಲಿದೆ. ಆಗ ನೀವು ಇವಿಎಂ ನಲ್ಲಿ ದೋಷವಿದೆ ಎಂದು ದೂಷಿಸುವಂತಿಲ್ಲ ಎಂದು ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT