ಅರವಿಂದ್ ಕೇಜ್ರಿವಾಲ್ 
ದೇಶ

ವಿದ್ಯುತ್ ಕಾಯ್ದೆ ತಿದ್ದುಪಡಿಯಿಂದ ಮೋದಿ ಆಪ್ತರಿಗೆ ಲಾಭ: ಕೇಜ್ರಿವಾಲ್ ಆರೋಪ

ಕೇಂದ್ರ ಸರ್ಕಾರ 2003ರ ವಿದ್ಯುತ್ ಕಾಯ್ದೆಗೆ ತರಲುದ್ದೇಶಿಸಿದ ತಿದ್ದುಪಡಿಗಳು ಅತ್ಯಂತ ಅಪಾಯಕಾರಿಯಾಗಿದೆ,

ನವದೆಹಲಿ: ಕೇಂದ್ರ ಸರ್ಕಾರ 2003ರ ವಿದ್ಯುತ್ ಕಾಯ್ದೆಗೆ ತರಲುದ್ದೇಶಿಸಿದ ತಿದ್ದುಪಡಿಗಳು ಅತ್ಯಂತ ಅಪಾಯಕಾರಿಯಾಗಿದೆ, 'ಕೆಲವು ವಿದ್ಯುತ್ ಕಂಪನಿ’ಗಳಿಗೆ ಲಾಭವಾಗಲು ದೇಶದ ಬಡ ಜನರು ಸಂಕಷ್ಟ ಅನುಭವಿಸುವುದಕೆ ಕಾರಣವಾಗಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.
ಪ್ರಸ್ತಾವಿತ ತಿದ್ದುಪಡಿ ದೇಶದ ಕೆಲವೇ ವಿದ್ಯುತ್ ಕಂಪನಿಗಳಿಗೆ ಲಾಭ ತರಲಿದೆ, ಉಳಿದಂತೆ ಬಡ ಜನತೆಗೆ ಇನ್ನಷ್ಟು ಆರ್ಥಿಕ ಹೊರೆಯನ್ನುಂಟುಮಾಡಲಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ದೇಶದ ಎಲ್ಲಾ ಮುಖ್ಯಮಂತ್ರಿಗಳಿಗೆ ಈ ಕುರಿತು ನಾನು ಪತ್ರ ಬರೆಯುತ್ತೇನೆ. ಬಿಜೆಪಿಯೇತರ ರಾಜ್ಯದ ಮುಖ್ಯಮಂತ್ರಿಗಳನ್ನು ವೈಯುಕ್ತಿಕವಾಗಿ ಭೇಟಿಯಾಗಿ ಈ ಸಂಅಬಂಧ ಚರ್ಚಿಸುತ್ತೇನೆ.ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹೇಳಿದ್ದಾರೆ.
ಪ್ರಸ್ತಾವಿತ ತಿದ್ದುಪಡಿಯಿಂದ ಕ್ರಾಸ್ ಸಬ್ಸಿಡಿಗಳು ಇಲ್ಲವಾಗಲಿದ್ದು ಇದರಿಂದ ಯುನಿಟ್ ಒಂದರ ಬೆಲೆ ಎರಡರಿಂದ ಐದು ಪಟ್ಟು ಏರಿಕೆಯಾಗಲಿದೆ.ಈ ಕಾರಣ ಮದ್ಯಮವರ್ಗ ಸಾಕಷ್ಟು ಕಷ್ಟಕ್ಕೀಡಾಗಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕೇಜ್ರಿವಾಲ್ ವಿವರಿಸಿದ್ದಾರೆ.
ಪ್ರಧಾನಿ ಮೋದಿಯವರಿಗೆ ಆಪ್ತವಾಗಿರುವ ಕೆಲವೇ ಕೆಲವು ವಿದ್ಯುತ್ ಕಂಪನಿಗಳಿಗೆ ಲಾಭ ಮಾಡಿಕೊಡುವ ಕಾರಣ ಈ ತಿದ್ದುಪಡಿ ತರಲಾಗುತ್ತಿದೆ ಎನ್ನುವುದನ್ನು ನಾನು ವಿವರಿಸುತ್ತೇನೆ, ಈ ಕುರಿತು ಜನ ಜಾಗೃತಿ ಮೂಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಕೇಜ್ರಿವಾಲ್ ಬಿಜೆಪಿ ಮುಖ್ಯಸ್ಥ ಅಮಿತ್ ಷಾ ಅವರಿಗೆ ದೆಹಲಿ ಸರ್ಕಾರ  ಮೂರು ವರ್ಷಗಳಲ್ಲಿ ಮಾಡಿದ ಕಾರ್ಯಗಳು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳ ಕುರಿತು ಮುಕ್ತ ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT