ಹತ್ಯೆಯಾದ ಪೆಹ್ಲು ಖಾನ್ 
ದೇಶ

ಆಲ್ವಾರ್ ಹತ್ಯೆ: ಕೋರ್ಟ್ ಗೆ ತೆರಳುತ್ತಿದ್ದ ಪೆಹ್ಲು ಖಾನ್‌ ಪುತ್ರ, ಸಾಕ್ಷಿಗಳ ಮೇಲೆ ಗುಂಡಿನ ದಾಳಿ

ರಾಜಸ್ಥಾನದಲ್ಲಿ ಗೋರಕ್ಷಕರಿಂದ ಹತ್ಯೆಯಾದ ಹರ್ಯಾಣ ಮೂಲದ ಪೆಹ್ಲು ಖಾನ್‌ ಅವರ ಪುತ್ರ ಇರ್ಷಾದ್ ಹಾಗೂ...

ಜೈಪುರ: ರಾಜಸ್ಥಾನದಲ್ಲಿ ಗೋರಕ್ಷಕರಿಂದ ಹತ್ಯೆಯಾದ ಹರ್ಯಾಣ ಮೂಲದ ಪೆಹ್ಲು ಖಾನ್‌ ಅವರ ಪುತ್ರ ಇರ್ಷಾದ್ ಹಾಗೂ ಇತರೆ ಪ್ರಮುಖ ಸಾಕ್ಷಿಗಳ ಮೇಲೆ ದುಷ್ಕರ್ಮಿಗಳು ಶನಿವಾರ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೆಹ್ಲು ಖಾನ್ ಹತ್ಯೆ ಪ್ರಕರಣದಲ್ಲಿ ಇರ್ಷಾದ್ ಹಾಗೂ ಇತರರು ಪ್ರತ್ಯಕ್ಷದರ್ಶಿಗಳಾಗಿದ್ದು, ಇಂದು ರಾಜಸ್ಥಾನದ ಬೆಹ್ರೋಡ್ ಕೋರ್ಟ್ ಗೆ ವಿಚಾರಣೆಗೆ ತೆರಳುತ್ತಿದ್ದ ವೇಳೆ ಅವರ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. 
ಈ ಸಂಬಂಧ ಇರ್ಷಾದ್ ಅವರು ಅಲ್ವಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನನ್ನ ಕಾರಿನಿ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ದೂರಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ನಂಬರ್ ಪ್ಲೇಟ್ ಇಲ್ಲದ ಕಪ್ಪು ಬಣ್ಣದ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ನಮಗೆ ಕಾರು ನಿಲ್ಲಿಸುವಂತೆ ಕೇಳಿಕೊಂಡರು. ಆದರೆ ನಾವು ಕಾರು ನಿಲ್ಲಿಸದಿದ್ದಾಗ ನಮ್ಮ ಕಾರಿನ ಮೇಲೆ ಗುಂಡು ಹಾರಿಸಿದರು ಎಂದು ಇರ್ಷಾದ್ ಆರೋಪಿಸಿದ್ದಾರೆ.
ಪ್ರಕರಣದ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು ಮತ್ತು ಇರ್ಷಾದ್ ಅವರು ನೀಡಿದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುವುದು ಎಂದು ಆಲ್ವಾರ್ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಸಿಂಗ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT