ಸಂಗ್ರಹ ಚಿತ್ರ 
ದೇಶ

ಮುಂಬೈ: ಪೋಲೀಸರನ್ನೇ ಮಕ್ಕಳ ಕಳ್ಳರೆಂದು ಹೇಳಿ ತಾನು ಬಂಧನದಿಂದ ಪಾರಾದ ಚಾಲಾಕಿ ಕಳ್ಳ!

ಕಳ್ಳನನ್ನು ಹಿಡಿಯಲೆಂದು ಮುಫ್ತಿಯಲ್ಲಿ ಬಂದಿದ್ದ ಪೋಲೀಸರರನ್ನೇ ಮಕ್ಕಳ ಕಳ್ಳ ಎಂದು ಭಾವಿಸಿ ಜನರ ಗುಂಪೊಂದು ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈ: ಕಳ್ಳನನ್ನು ಹಿಡಿಯಲೆಂದು ಮುಫ್ತಿಯಲ್ಲಿ ಬಂದಿದ್ದ ಪೋಲೀಸರರನ್ನೇ ಮಕ್ಕಳ ಕಳ್ಳ ಎಂದು ಭಾವಿಸಿ ಜನರ ಗುಂಪೊಂದು ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈ ಶಿವಾಜಿ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಘಟನೆ ವಿವರ
ಕಳ್ಳರನ್ನು ಹಿಡಿಯಲು ಮುಫ್ತಿಯಲ್ಲಿ ಬಂದಿದ್ದ ಇಬ್ಬರುಪೋಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳ್ಳನೊಬ್ಬ ಪೋಲೀಸರನ್ನೇ ತೋರಿಸಿ "ಇವರು ಮಕ್ಕಳ ಕಳ್ಳರು" ಎಂದು ವದಂತಿ ಹರಡಿದ್ದಾನೆ.ಜನರು ಕಳ್ಳನ ಮಾತನ್ನು ನಂಬಿ ಮುಫ್ತಿಯಲ್ಲಿದ್ದ ಪೋಲೀಸರ ಮೇಲೆ ಹಲ್ಲೆ ನಡೆಸುತ್ತಾರೆ.ಈ ವೇಳೆ ನಿಜವಾದ ಕಳ್ಳ ಗುಂಪಿನಿಂದ ತಪ್ಪಿಸಿಕೊಂಡು ಪರಾರಿಯಾಗಲು ಯಶಸ್ವಿಯಾಗುತ್ತಾನೆ.
ಇತ್ತ ಘಟನೆ ವಿವರ ತಿಳಿದ ಶಿವಾಜಿ ನಗರ ಠಾಣೆಯ ಪಿಸಿಆರ್ ವ್ಯಾನ್ ಸ್ಥಳಕ್ಕಾಗಮಿಸಿ ಸ್ಥಳೀಯ ಜನರಿಂದ ಪೋಲೀಸರನ್ನು ರಕ್ಷಿಸಿದ್ದಾರೆ. ಹಲ್ಲೆಗೊಳಗಾದ ಪೋಲೀಸ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
ಗಲಭೆಯನ್ನು ಹತೋಟಿಗೆ ತಂದಿರುವ ಪೋಲೀಸರು ಕಳ್ಳ ವದಂತಿ ಹಬ್ಬಿಸಿ ಪರಾರಿಯಾಗಲು ಸಹಕರಿಸಿದ್ದಾರೆ ಎನ್ನಲಾದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯದ ಆಧಾರದ ಮೇಲೆ ತಪ್ಪಿಸಿಕೊಂಡ ಕಳ್ಳನನ್ನು ಹಿಡಿಯಲು ಪೋಲೀಸರು ವ್ಯಾಪಕ ಕ್ರಮ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT