ರಾಬರ್ಟ್ ವಾದ್ರಾ 
ದೇಶ

ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ನಿರೀಕ್ಷಣಾ ಜಾಮೀನು ಮಂಜೂರು

ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಾಗೂ ಅವರ ಅಪ್ತ ಮನೋಜ್ ಅರೋರಾ ಅವರಿಗೆ ವಿಶೇಷ ಸಿಬಿಐ ನ್ಯಾಯಾಲಯ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನವದೆಹಲಿ: ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಾಗೂ ಅವರ ಅಪ್ತ  ಮನೋಜ್ ಅರೋರಾ ಅವರಿಗೆ ವಿಶೇಷ ಸಿಬಿಐ ನ್ಯಾಯಾಲಯ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ರಾಬರ್ಟ್ ವಾದ್ರಾ ಹಾಗೂ ಮನೋಜ್ ಅರೋರಾ  ತಲಾ 5 ಲಕ್ಷ ರೂಪಾಯಿ ಶ್ಯೂರಿಟಿಯ ಬಾಂಡ್  ನೀಡಬೇಕು ಹಾಗೂ ಯಾವುದೇ ಮಾಹಿತಿ ನೀಡಿದೆ ದೇಶದಿಂದ ಬೇರೆಡೆ ಹೋಗದಂತೆ  ನಿರ್ದೇಶಿಸಿ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್   ಜಾಮೀನು ಮಂಜೂರು ಮಾಡಿದ್ದಾರೆ.

ಈ ಪ್ರಕರಣದಲ್ಲಿ ಸಾಕ್ಷಿದಾರರ ಮೇಲೆ ಯಾವುದೇ ಪ್ರಭಾವ ಬೀರುವಂತಿಲ್ಲ, ಸಾಕ್ಷ್ಯಾಧಾರಗಳನ್ನು ತಿರುಚಬಾರದು ಎಂದು ನ್ಯಾಯಾಲಯ ಇಬ್ಬರಿಗೂ ಸೂಚಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ಆಗಿರುವ ರಾಬರ್ಟ್ ವಾದ್ರಾ ಲಂಡನ್  ಮೂಲದ ಸುಮಾರು 1.9 ಮಿಲಿಯನ್ ಪೌಂಡ್ ಮೊತ್ತದ ಆಸ್ತಿ ಖರೀದಿಯಲ್ಲಿ ಹಣ ವರ್ಗಾವಣೆಯ ಆರೋಪ ಎದುರಿಸುತ್ತಿದ್ದಾರೆ.
ರಾಬಾರ್ಟ್ ವಾದ್ರಾ ಅವರ  ಮಧ್ಯಂತರ ಜಾಮೀನು ಅವಧಿ ಫೆಬ್ರವರಿ 2 ರಿಂದಲೂ ವಿಸ್ತರಣೆಯಾಗುತ್ತಾ ಬಂದಿತ್ತು. ವಿಚಾರಣೆಗಾಗಿ ರಾಬರ್ಟ್ ವಾದ್ರಾ ಅವರನ್ನು ತಮ್ಮ  ವಶಕ್ಕೆ ನೀಡುವಂತೆ ಇಡಿ ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT