ಸಂಗ್ರಹ ಚಿತ್ರ 
ದೇಶ

ಅಮಾನತ್ತಾದ ಬನಾರಸ್ ವಿವಿಯ ವಿದ್ಯಾರ್ಥಿಯ ಗುಂಡು ಹಾರಿಸಿ ಕೊಲೆಗೈದ ದುಷ್ಕರ್ಮಿಗಳು!

ಉತ್ತರಪ್ರದೇಶದ ಪ್ರತಿಷ್ಠಿತ ಬನಾರಸ್​ ಹಿಂದೂ ವಿಶ್ವವಿದ್ಯಾಲಯದ ಅಮಾನತ್ತಾದ ವಿದ್ಯಾರ್ಥಿ ಗೌರವ್ ಸಿಂಗ್ (20) ಮೇಲೆ ನೆನ್ನೆ ತಡರಾತ್ರಿ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ವಾರಣಾಸಿ: ಉತ್ತರಪ್ರದೇಶದ ಪ್ರತಿಷ್ಠಿತ ಬನಾರಸ್​ ಹಿಂದೂ ವಿಶ್ವವಿದ್ಯಾಲಯದ ಅಮಾನತ್ತಾದ ವಿದ್ಯಾರ್ಥಿ ಗೌರವ್ ಸಿಂಗ್ (20) ಮೇಲೆ ನೆನ್ನೆ ತಡರಾತ್ರಿ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. 
ಮೂಲಗಳ ಪ್ರಕಾರ ಬನಾರಸ್ ವಿವಿಯ ಕ್ಯಾಂಪಸ್ ಒಳಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಹಾಸ್ಟೆಲ್ ನ ಗೇಟ್​ ಬಳಿ ನಿಂತಿದ್ದ ಗೌರವ್​ ಮೇಲೆ ಅನಾಮಿಕ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ತಕ್ಷಣವೇ ಅವರನ್ನು ವಿಶ್ವವಿದ್ಯಾಲಯದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಗೌರವ್ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ 1.30ರ ಸಮಯದಲ್ಲಿ ಗೌರವ್​ ಸಿಂಗ್​ ಬಿರ್ಲಾ ಹಾಸ್ಟೆಲ್​ ಮುಂಭಾಗದ ಗೇಟ್​ ಬಳಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಗೌರವ್ ಮೇಲೆ ಗುಂಡು ಹಾರಿಸಿದ್ದಾರೆ. ಮೂರು ಗುಂಡುಗಳು ಗೌರವ್ ರ ಹೊಟ್ಟೆ ಮತ್ತು ಎದೆಗೆ ತಗುಲಿ, ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಕ್ಯಾಂಪಸ್​ ಆವರಣದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು.
ಒಟ್ಟು ಹತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ವಾರಣಾಸಿ ಪೊಲೀಸರು ತಿಳಿಸಿದ್ದು, ಘಟನೆ ಸಂಬಂಧ ವಿವಿಯ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ವಿದ್ಯಾರ್ಥಿಗಳ ಭದ್ರತೆ ವಿಷಯವಾಗಿ ಕ್ಯಾಂಪಸ್ ನಲ್ಲಿ ಸೃಷ್ಟಿಯಾದ ಗಲಭೆಯಲ್ಲಿ ಗೌರವ್​ ಕೂಡ ಪಾತ್ರಧಾರಿ ಎಂದು ಆರೋಪಿಸಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಕಳೆದ ವರ್ಷ ಗೌರವ್​ ಸಿಂಗ್ ನನ್ನು ಅಮಾನತ್ತು ಮಾಡಿತ್ತು. ಈ ಹಿಂಸಾಚಾರದಲ್ಲಿ ಗೌರವ್ ಬಸ್​ ಸುಡಲು ಸಹಕರಿಸಿದ್ದರು ಎಂಬ ಗಂಭೀರ ಆರೋಪ ಅವರ ಮೇಲಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT