ಎಲ್ ಕೆ ಅಡ್ವಾಣಿ 
ದೇಶ

ಬಿಜೆಪಿ ತನ್ನ ವಿರೋಧಿಗಳನ್ನು 'ರಾಷ್ಟ್ರ-ವಿರೋಧಿ, ಶತ್ರುಗಳೆಂದು' ಎಂದೂ ಭಾವಿಸಿಲ್ಲ: ಎಲ್.ಕೆ. ಅಡ್ವಾಣಿ

ಬಿಜೆಪಿ ತನ್ನನ್ನು ರಾಜಕೀಯವಾಗಿ ಒಪ್ಪದವರನ್ನು ರಾಷ್ಟ್ರದ ವಿರೋಧಿಗಳೆಂದು, ಶತ್ರುಗಳೆಂದು ಎಂದಿಗೂ ಪರಿಗಣಿಸಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.

ನವದೆಹಲಿ: ಬಿಜೆಪಿ ತನ್ನನ್ನು ರಾಜಕೀಯವಾಗಿ ಒಪ್ಪದವರನ್ನು ರಾಷ್ಟ್ರದ ವಿರೋಧಿಗಳೆಂದು, ಶತ್ರುಗಳೆಂದು ಎಂದಿಗೂ ಪರಿಗಣಿಸಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಹೇಳಿದ್ದಾರೆ. 
ಏ.06 ರಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆ ಇರುವ ಹಿನ್ನೆಲೆಯಲ್ಲಿ ಬ್ಲಾಗ್ ಬರೆದಿರುವ ಎಲ್ ಕೆ ಅಡ್ವಾಣಿ, "  ವೈವಿಧ್ಯತೆ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯವನ್ನು ಗೌರವಿಸುವುದು ಭಾರತೀಯ ಪ್ರಜಾಪ್ರಭುತ್ವದ ಸಾರ, ಬಿಜೆಪಿ ಸ್ಥಾಪನೆಯಾದ ದಿನದಿಂದಲೂ, ತನ್ನ ರಾಜಕೀಯ ವಿರೋಧಿಗಳನ್ನು ಶತ್ರುಗಳೆಂದು ಭಾವಿಸಿಲ್ಲ, ಬದಲಾಗಿ ಎದುರಾಳಿಗಳೆಂದಷ್ಟೇ ಪರಿಗಣಿಸಿದೆ ಎಂದು ಹೇಳಿದ್ದಾರೆ. 
5 ವರ್ಷಗಳ ನಂತರ ಬ್ಲಾಗ್ ಬರೆದಿರುವ ಅಡ್ವಾಣಿ, ಭಾರತೀಯ ರಾಷ್ಟ್ರೀಯತೆಯ ಕಲ್ಪನೆಯಲ್ಲಿಯೂ ಸಹ ರಾಜಕೀಯ ವಿರೋಧಿಗಳನ್ನು ದೇಶ ವಿರೋಧಿಗಳೆಂದು ಎಂದಿಗೂ ಪರಿಗಣಿಸಲಾಗಿಲ್ಲ. ರಾಜಕೀಯವಾಗಿ ಹಾಗೂ ವೈಯಕ್ತಿವಾಗಿ ಪ್ರತಿ ಪ್ರಜೆಯ ಆಯ್ಕೆಯ ಸ್ವಾತಂತ್ರ್ಯಕ್ಕೆ ಪಕ್ಷ ಬದ್ಧವಾಗಿದೆ ಎಂದು ಹೇಳಿದ್ದಾರೆ. 
ರಾಷ್ಟ್ರದ ಭದ್ರತೆಯನ್ನು ಚುನಾವಣೆಯ ವಿಷಯವಾಗಿರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿಪಕ್ಷಗಳನ್ನು ದೇಶ ವಿರೋಧಿಗಳೆಂದು ಆರೋಪಿಸುತ್ತಿರುವ ಸಂದರ್ಭದಲ್ಲೇ ಅಡ್ವಾಣಿ ಅವರ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT