ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗವನ್ನು ಜೈಲಿಗೆ ಕಳಿಸುವೆ: ಪ್ರಕಾಶ್ ಅಂಬೇಡ್ಕರ್ 
ದೇಶ

ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗವನ್ನು ಜೈಲಿಗೆ ಕಳಿಸುವೆ: ಪ್ರಕಾಶ್ ಅಂಬೇಡ್ಕರ್

ದಲಿತ ನಾಯಕ ಹಾಗೂ ಮೂರು ಬಾರಿ ಸಂಸದರಾಗಿರುವ ಪ್ರಕಾಶ್ ಅಂಬೇಡ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಯವತ್ಮಲ್: ದಲಿತ ನಾಯಕ ಹಾಗೂ ಮೂರು ಬಾರಿ ಸಂಸದರಾಗಿರುವ ಪ್ರಕಾಶ್ ಅಂಬೇಡ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಯವತ್ಮಲ್ ನಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಕಾಶ್ ಅಂಬೇಡ್ಕರ್, ಚುನಾವಣಾ ಆಯೋಗವನ್ನೇ 2 ದಿನಗಳ ಕಾಲ ಜೈಲಿಗೆ ಕಳಿಸುವುದಾಗಿ ಹೇಳಿದ್ದಾರೆ. ಈ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ.
ಪುಲ್ವಾಮ ಭಯೋತ್ಪಾದಕ ದಾಳಿ ಬಗ್ಗೆ ಮಾತನಾಡಲು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಅವಕಾಶ ನೀಡದ ಬಗ್ಗೆ ಪ್ರಕಾಶ್ ಅಂಬೇಡ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪುಲ್ವಾಮ ದಾಳಿಯಲ್ಲಿ 40 ಯೋಧರನ್ನು ಕಳೆದುಕೊಂಡೆವು. ಆದರೆ ಸುಮ್ಮನೆ ಕುಳಿತಿದ್ದೇವೆ. ಪುಲ್ವಾಮ ದಾಳಿ ಬಗ್ಗೆ ಮಾತನಾಡದೇ ಇರುವಂತೆ ಸೂಚನೆ ನೀಡಲಾಗಿದೆ. ಚುನಾವಣಾ ಆಯೋಗ ನಮ್ಮನ್ನು ಹೇಗೆ ಕಟ್ಟುಹಾಕುವುದಕ್ಕೆ ಸಾಧ್ಯ? ಸಂವಿಧಾನ ನಮಗೆ ಮಾತನಾಡುವ ಹಕ್ಕು ನೀಡಿದೆ. ನಾನು ಬಿಜೆಪಿಯಲ್ಲ ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗವನ್ನೇ 2 ದಿನ ಜೈಲಿಗೆ ಕಳಿಸುತ್ತೇನೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದರು.
ಪ್ರಕಾಶ್ ಅಂಬೇಡ್ಕರ್ ಹೇಳಿಕೆಯನ್ನು ಗಮನಿಸಿರುವ ಚುನಾವಣಾ ಆಯೋಗ, ಸ್ಥಳೀಯ ಅಧಿಕಾರಿಗಳಿಂದ ವರದಿ ಕೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT