ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗವನ್ನು ಜೈಲಿಗೆ ಕಳಿಸುವೆ: ಪ್ರಕಾಶ್ ಅಂಬೇಡ್ಕರ್ 
ದೇಶ

ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗವನ್ನು ಜೈಲಿಗೆ ಕಳಿಸುವೆ: ಪ್ರಕಾಶ್ ಅಂಬೇಡ್ಕರ್

ದಲಿತ ನಾಯಕ ಹಾಗೂ ಮೂರು ಬಾರಿ ಸಂಸದರಾಗಿರುವ ಪ್ರಕಾಶ್ ಅಂಬೇಡ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಯವತ್ಮಲ್: ದಲಿತ ನಾಯಕ ಹಾಗೂ ಮೂರು ಬಾರಿ ಸಂಸದರಾಗಿರುವ ಪ್ರಕಾಶ್ ಅಂಬೇಡ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಯವತ್ಮಲ್ ನಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಕಾಶ್ ಅಂಬೇಡ್ಕರ್, ಚುನಾವಣಾ ಆಯೋಗವನ್ನೇ 2 ದಿನಗಳ ಕಾಲ ಜೈಲಿಗೆ ಕಳಿಸುವುದಾಗಿ ಹೇಳಿದ್ದಾರೆ. ಈ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ.
ಪುಲ್ವಾಮ ಭಯೋತ್ಪಾದಕ ದಾಳಿ ಬಗ್ಗೆ ಮಾತನಾಡಲು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಅವಕಾಶ ನೀಡದ ಬಗ್ಗೆ ಪ್ರಕಾಶ್ ಅಂಬೇಡ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪುಲ್ವಾಮ ದಾಳಿಯಲ್ಲಿ 40 ಯೋಧರನ್ನು ಕಳೆದುಕೊಂಡೆವು. ಆದರೆ ಸುಮ್ಮನೆ ಕುಳಿತಿದ್ದೇವೆ. ಪುಲ್ವಾಮ ದಾಳಿ ಬಗ್ಗೆ ಮಾತನಾಡದೇ ಇರುವಂತೆ ಸೂಚನೆ ನೀಡಲಾಗಿದೆ. ಚುನಾವಣಾ ಆಯೋಗ ನಮ್ಮನ್ನು ಹೇಗೆ ಕಟ್ಟುಹಾಕುವುದಕ್ಕೆ ಸಾಧ್ಯ? ಸಂವಿಧಾನ ನಮಗೆ ಮಾತನಾಡುವ ಹಕ್ಕು ನೀಡಿದೆ. ನಾನು ಬಿಜೆಪಿಯಲ್ಲ ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗವನ್ನೇ 2 ದಿನ ಜೈಲಿಗೆ ಕಳಿಸುತ್ತೇನೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದರು.
ಪ್ರಕಾಶ್ ಅಂಬೇಡ್ಕರ್ ಹೇಳಿಕೆಯನ್ನು ಗಮನಿಸಿರುವ ಚುನಾವಣಾ ಆಯೋಗ, ಸ್ಥಳೀಯ ಅಧಿಕಾರಿಗಳಿಂದ ವರದಿ ಕೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT