ಕ್ರಿಶ್ಚಿಯನ್ ಮೈಕೆಲ್ 
ದೇಶ

ವಿವಿಐಪಿ ಚಾಪರ್ ಪ್ರಕರಣ:'ಎಪಿ' ಎಂದರೆ ಅಹಮದ್ ಪಟೇಲ್, ಇಡಿ ಚಾರ್ಜ್ ಶೀಟ್ ನಲ್ಲಿ ರಹಸ್ಯ ಬಯಲು!

ಅಗಸ್ಟಾ ವೆಸ್ಟ್ ಲ್ಯಾಂಡ್, ವಿವಿಐಪಿ ಚಾಪರ್ ಹಗರಣದ ಆರೋಪಿ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಡೈರಿಯಲ್ಲಿ ಬರೆದುಕೊಂಡಿದ್ದ "ಎಪಿ" ಎಂದರೆ ಅಹಮದ್ ಪಟೇಲ್ ಎಂದು ಗುರುತಿಸಿದ್ದಾಗಿ ತಿಳಿದುಬಂದಿದೆ.

ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್, ವಿವಿಐಪಿ ಚಾಪರ್ ಹಗರಣದ ಆರೋಪಿ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಡೈರಿಯಲ್ಲಿ ಬರೆದುಕೊಂಡಿದ್ದ "ಎಪಿ" ಎಂದರೆ ಅಹಮದ್ ಪಟೇಲ್ ಎಂದು ಗುರುತಿಸಿದ್ದಾಗಿ ತಿಳಿದುಬಂದಿದೆ. ಗುರುವಾರ ಜಾರಿ ನಿರ್ದೇಶನಾಲಯ ಸಿಬಿಐಅ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಪೂರಕ ಚಾರ್ಜ್ ಶೀಟ್ ನಲ್ಲಿ ಈ ಕುರಿತು ರಹಸ್ಯ ಬಹಿರಂಗವಾಗಿದೆ.
ಈ ಒಪ್ಪಂದ ಜಾರಿ ಮಾಡುವ ವೇಳೆ ರಕ್ಷಣಾ ಅಧಿಕಾರಿಗಳು, ಮಧ್ಯವರ್ತಿಗಳು, ಆಡಳಿತಾಧಿಕಾರಿಗಳು, ಆಡಳಿತ ಪಕ್ಷದ ಪ್ರಮುಖ ನೇತಾರರಿಗೆ ಕಿಕ್ ಬ್ಯಾಕ್ ನ ಪಾಲನ್ನು ನೀಡಲಾಗಿತ್ತು ಎಂದು ಅಕ್ರಮ ಹಣ ವರ್ಗಾವಣೆ ನಿಷೇಧ ಕಾಯ್ದೆ (ಪಿಎಂಎಲ್ ಎ) ಅಡಿಯಲ್ಲಿ ಇಡಿ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ವಿವರಿಸಿದೆ.
ಮೈಕೆಲ್ ವಿಚಾರಣೆ ವೇಳೆ "ಎಪಿ" ಹಾಗೂ ಎಫ್‌ಎಎಂ ಎಂಬ ಕೋಡ್ ಗಳ ವಿವರ ನೀಡಿದ್ದು ಎಪಿ ಎಂದರೆ ಅಹಮದ್ ಪಟೇಲ್  ಹಾಗೂ ಎಫ್‌ಎಎಂ ಎಂದರೆ ಅವರ ಕುಟುಂಬ ಎಂದು ವಿವರಿಸಿರುವುದಾಗಿ ಚಾರ್ಜ್ ಶೀಟ್ ನಲ್ಲಿ ಹೇಳಿದೆ.
ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಮೇಲೆ ಕೆಲ ಕಾಂಗ್ರೆಸ್ ಪ್ರಭಾವಿ ನಾಯಕರ ಒತ್ತಡವಿತ್ತು ಎನ್ನುವುದನ್ನು ಸಹ ಮೈಕಲ್ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾನೆ. ಎಫ್‌ಎಎಂ  ಎಂದರೆ ಕುಟುಂಬ - ಕಾಂಗ್ರೆಸ್, ಗಾಂಧಿ ಕುಟುಂಬ ಎಂದು ಆತ ವಿವರಿಸಿದ್ದಾನೆ. ಒಟ್ಟು  3 ಕೋಟಿ ಯುರೋಗಳ ಲಂಚ ಲಂಚದ ಹಣ ಪಾವತಿಸಿರುವ ವಿವರಗಳನ್ನು ಡೈಲ್ರಿಯಲ್ಲಿ ಬರೆಯಲಾಗಿದೆ ಎಂದಿ ಕೋರ್ಟ್ ಗೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ವಿವರಿಸಲಾಗಿದೆ.
ಇಡಿ ಗುರುವಾರ ಸಿಬಿಐ ವಿಶೇಷ ನ್ಯಾಯಾಲಯಕ್ಕೆ 52  ಮುಖ್ಯ ಪುಟಗಳನ್ನೂ ಸೇರಿ 3,000-ಪುಟಗಳಿರುವ ಪೂರಕ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದು ಇದರಲ್ಲಿ ಮೈಕಲ್ ಹಾಗೂ ಅವನ ಸ್ನೇಹಿತ ಡೇವಿಡ್ ಸೈಮ್ಸ್ ಹೆಸರನ್ನು ಸಹ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT