ಪಾಕ್ ಪ್ರಧಾನಿ ಇಮ್ರಾನ್ ಖಾನ್ 
ದೇಶ

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಯುದ್ಧೋನ್ಮಾದ ಸೃಷ್ಟಿ: ಅಮೆರಿಕ ನಿಯತಕಾಲಿಕೆ ಆಧರಿಸಿ ಪಾಕ್ ಆರೋಪ

2019 ರ ಲೋಕಸಭಾ ಚುನಾವಣೆ ಗೆಲ್ಲುವುದಕ್ಕೆ ಬಿಜೆಪಿಯಿಂದ ಯುದ್ಧೋನ್ಮಾದ ಸೃಷ್ಟಿಯಾಗುತ್ತಿದೆ ಎಂದು ಅಮೆರಿಕ ನಿಯತಕಾಲಿಕೆಯ ವರದಿಯನ್ನು ಆಧರಿಸಿ ಪಾಕಿಸ್ತಾನ ಆರೋಪ ಮಾಡಿದೆ.

ಇಸ್ಲಾಮಾಬಾದ್: 2019 ರ ಲೋಕಸಭಾ ಚುನಾವಣೆ ಗೆಲ್ಲುವುದಕ್ಕೆ ಬಿಜೆಪಿಯಿಂದ ಯುದ್ಧೋನ್ಮಾದ ಸೃಷ್ಟಿಯಾಗುತ್ತಿದೆ ಎಂದು ಅಮೆರಿಕ ನಿಯತಕಾಲಿಕೆಯ ವರದಿಯನ್ನು ಆಧರಿಸಿ ಪಾಕಿಸ್ತಾನ ಆರೋಪ ಮಾಡಿದೆ. 
ತನ್ನ ಸೇನೆಯ ಎಫ್-16 ಫೈಟರ್ ಜೆಟ್ ನ್ನು ಭಾರತ ಸೇನೆ ಧ್ವಂಸಗೊಳಿಸಿತ್ತು ಎಂಬ ಅಂಶವನ್ನು ನಿರಾಕರಿಸಿರುವ ಪಾಕಿಸ್ತಾನ ತನ್ನ ವಾದವನ್ನು ಸಮರ್ಥಿಸಿಕೊಳ್ಳುವುದಕ್ಕೆ ಅಮೆರಿಕ ನಿಯತಕಾಲಿಕೆಯ ವರದಿಯನ್ನು ಉಲ್ಲೇಖಿಸಿದೆ. 
ಪುಲ್ವಾಮ ದಾಳಿಗೆ ಪ್ರತಿಯಾಗಿ ಪಾಕ್ ಉಗ್ರರ ನೆಲೆಗಳ ಮೇಲೆ ನಡೆದ ವೈಮಾನಿಕ ದಾಳಿಯ ನಂತರ ಭಾರತದ ಗಡಿ ವಾಯುಗಡಿ ದಾಟಿದ್ದ ಎಫ್-16 ಫೈಟರ್ ಜೆಟ್ ಗಳನ್ನು ಹೊಡೆದುರುಳಿಸಿತ್ತು. ಈ ಘಟನೆ ಬಗ್ಗೆ ಅಮೆರಿಕದ ವಿದೇಶಾಂಗ ಇಲಾಖೆ ನಿಯತಕಾಲಿಕೆ ವರದಿ ಪ್ರಕಟಿಸಿದ್ದು, ಅಮೆರಿಕ ನಿರ್ಮಿತ ಯಾವುದೇ ಎಫ್-16 ಫೈಟರ್ ಜೆಟ್ ಗಳು ಪಾಕಿಸ್ತಾನ ಸೇನೆಯಿಂದ ನಾಪತ್ತೆಯಾಗಿಲ್ಲ ಎಂದು ಹೇಳಿತ್ತು. ಪರಿಸ್ಥಿತಿಯ ಬಗ್ಗೆ ಅರಿವಿರುವ ಅಮೆರಿಕದ ಇಬ್ಬರು ಹಿರಿಯ ರಕ್ಷಣಾ ಅಧಿಕಾರಿಗಳನ್ನು ಉಲ್ಲೇಖಿಸಿ ನಿಯತಕಾಲಿಕೆ ವರದಿ ಪ್ರಕಟಿಸಿತ್ತು. 
ಅಮೆರಿಕದ ನಿಯತಕಾಲಿಕೆ ವರದಿಗೆ ಪ್ರತಿಕ್ರಿಯೆ ನೀಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಭಾರತದ ಆಡಳಿತಾರೂಢ ಪಕ್ಷದ ವಿರುದ್ಧ ಆರೋಪ ಮಾಡಿದ್ದಾರೆ. ಸತ್ಯ ಎಂದಿಗೂ ಗೆಲ್ಲುತ್ತದೆ, ಅದೇ ಅತ್ಯುನ್ನತ ತತ್ವ. ಬಿಜೆಪಿ  ಯುದ್ಧೋನ್ಮಾದ ಸ್ಥಿತಿಯನ್ನು ನಿರ್ಮಿಸುವ ಮೂಲಕ ಚುನಾವಣೆ ಗೆಲ್ಲಲು ಹೊರಟಿದೆ. ಪಾಕಿಸ್ತಾನದ ಎಫ್-16 ನ್ನು ಹೊಡೆದುರುಳಿಸಿದ್ದೇವೆ ಎಂದು ಬಿಜೆಪಿ ನೇತೃತ್ವದ ಸರ್ಕಾರ ಹೇಳಿತ್ತು. ಆದರೆ ಅಮೆರಿಕ ಸೇನಾ ಅಧಿಕಾರಿಗಳು ಇದಕ್ಕೆ ತದ್ವಿರುದ್ಧವಾಗಿ ಹೇಳಿಕೆ ನೀಡಿದ್ದು, ಬಿಜೆಪಿಗೆ ಇದು ತಿರುಗುಬಾಣವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT