ರಾಮಮಂದಿರಕ್ಕಾಗಿ ಅಯೋಧ್ಯೆಯಲ್ಲಿ ಕೆತ್ತಲ್ಪಟ್ಟಿರುವ ಕಲ್ಲುಗಳು (ಫೈಲ್ ಚಿತ್ರ) 
ದೇಶ

ಅಯೋಧ್ಯೆ: ಹೆಚ್ಚುವರಿ ಭೂಮಿ ಹಸ್ತಾಂತರಕ್ಕೆ ವಿರೋಧ, ಕೇಂದ್ರದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ನಿರ್ಮೋಹಿ ಅಖಾಡ

ಅಯೋಧ್ಯೆ ವಿವಾದದ ಕುರಿತು ಸುಪ್ರೀಂ ನಿರ್ದೇಶನದಂತೆ ಸಂಧಾನ ಸಮಿತಿ ರಚನೆಯಾಗಿ ಎಂಟು ವಾರಗಳಲ್ಲಿ ಸಂಧಾನ ಸಮಿತಿ ತನ್ನ ತೀರ್ಮಾನ ಹೇಳುವುದರಲ್ಲಿದೆ ಆದರೆ ಈ ನಡುವೆಯೇ ನಿರ್ಮೋಹಿ ಅಖಾಡಾ ವಿವಾದದ ಕುರಿತು ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ನವದೆಹಲಿ: ಅಯೋಧ್ಯೆ ವಿವಾದದ ಕುರಿತು ಸುಪ್ರೀಂ ನಿರ್ದೇಶನದಂತೆ ಸಂಧಾನ ಸಮಿತಿ ರಚನೆಯಾಗಿ ಎಂಟು ವಾರಗಳಲ್ಲಿ ಸಂಧಾನ ಸಮಿತಿ ತನ್ನ ತೀರ್ಮಾನ ಹೇಳುವುದರಲ್ಲಿದೆ ಆದರೆ ಈ ನಡುವೆಯೇ ನಿರ್ಮೋಹಿ ಅಖಾಡಾ ವಿವಾದದ ಕುರಿತು ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ರಾಮಜನ್ಮಭುಮಿ ವಿವಾದಿತ ಜಾಗದ ಸುತ್ತಮುತ್ತಲ ಹೆಚ್ಚುವರಿ ಭೂಮಿಯನ್ನು ಅದರ ಮೂಲ ಮಾಲಿಕರಿಗೆ ನಿಡುವ ಕುರಿತು ಕೇಂದ್ರ ಸರ್ಕಾರ ಕೈಗೊಳ್ಳುತಿರುವ ಕ್ರಮದ ವಿರುದ್ಧ ನಿರ್ಮೋಹಿ ಅಖಾಡಾ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ.
ಈ ಜನವರಿಯಲ್ಲಿ ಸರ್ಕಾರ ವಿವಾದಿತ ಬುಮಿಯ ಸುತ್ತಮುತ್ತಲ "ಹೆಚ್ಚುವರಿ / ವಿವಾದರಹಿತವಾದ" 67.7 ಎಕರೆ ಭೂಮಿಯನ್ನು ಅದರ ಮೂಲ ಮಾಲಿಕರಿಗೆ ಹಸ್ತಾಂತರಿಸುವುದಾಗಿ ಕೋರ್ಟ್ ಗೆ ಹೇಳಿತ್ತು. ಇದರಲ್ಲಿ ಸುಮಾರು 48 ಎಕರೆ ಜಾಗವು ರಾಮಜನ್ಮಭೂಮಿ ನ್ಯಾಸ್ ಗೆ ಸೇರಿದ್ದಾಗಿದೆ.
1994ರಲ್ಲಿ ಸರ್ಕಾರ ಈ ಜಾಗವನ್ನು ವಶಕ್ಕೆ ಪಡೆದುಕೊಂಡಾಗ ನಿರ್ಮೋಹಿ ಅಖಾಡ ನಿರ್ಮಿಸಿದ್ದ ಹಲವು ದೇವಾಲಯಗಳು ನಾಶವಾಗಿದೆ ಎಂದು ಅಖಾಡಾ ಈ ದಿನ ಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ.
ಇಷ್ಟೇ ಅಲ್ಲದೆ ಅಖಾಡಾ ಅಯೋಧ್ಯೆ-ಬಾಬರಿ ಮಸೀದಿ ವಿವಾದವನ್ನು ನ್ಯಾಯಾಲಯ ಸ್ವತಃ ಬಗೆಹರಿಸಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT