ವೀರಭದ್ರ ಸಿಂಗ್ 
ದೇಶ

ಬಾಬ್ರಿ ಮಸೀದಿ ಇದ್ದ ಜಾಗದಲ್ಲೇ ನಮಗೆ ರಾಮಮಂದಿರ ಬೇಕು: ಕಾಂಗ್ರೆಸ್ ನಾಯಕ ವೀರಭದ್ರ ಸಿಂಗ್

ಅಚ್ಚರಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡುವ ರೀತಿಯಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ರಾಮ ಮಂದಿರ ನಿರ್ಮಾಣ ಬಗ್ಗೆ ಹೇಳಿಕೆ ನೀಡಿದ್ದಾರೆ.

ಅಚ್ಚರಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡುವ ರೀತಿಯಲ್ಲಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ರಾಮ ಮಂದಿರ ನಿರ್ಮಾಣ ಬಗ್ಗೆ ಹೇಳಿಕೆ ನೀಡಿದ್ದಾರೆ. 
ರಾಮ ಮಂದಿರ ನಿರ್ಮಾಣದ ಪರವಾಗಿ ಹೇಳಿಕೆ ನೀಡಿರುವ ವೀರಭದ್ರ ಸಿಂಗ್, ಅಯೋಧ್ಯೆಯ ಯಾವ ಜಾಗದಲ್ಲಿ ಬಾಬ್ರಿ ಮಸೀದಿ ನಿರ್ಮಾಣವಾಗಿತ್ತೋ ಅದೇ ಜಾಗದ್ದಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂದಿದ್ದಾರೆ. 
ಸಂದರ್ಶನವೊಂದರಲ್ಲಿ ರಾಮ ಮಂದಿರದ ಬಗ್ಗೆ ಮಾತನಾಡಿರುವ ವೀರಭದ್ರ ಸಿಂಗ್, ಭಾರತಕ್ಕೆ ಇಸ್ಲಾಮ್ ಬರುವುದಕ್ಕೂ ಮುನ್ನ ಅಯೋಧ್ಯೆಯಲ್ಲಿ ರಾಮ ಮಂದಿರ ಇತ್ತು. ಮಂದಿರವನ್ನು ಕೆಡವಿ ಮಸೀದಿಯನ್ನು ನಿರ್ಮಿಸಲಾಗಿತ್ತು. ಅಯೋಧ್ಯೆ ರಾಮನ ರಾಜಧಾನಿ, ಮಸೀದಿ ಇದ್ದ ಜಾಗದಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ರಾಮ ಮಂದಿರ ನಿರ್ಮಾಣ ಮಾಡುವುದಕ್ಕೆ ಬಿಜೆಪಿಗೆ ಧೈರ್ಯದ ಕೊರತೆ ಇದೆ ಎಂದು ವೀರಭದ್ರ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ ಬಿಜೆಪಿಗೆ ಧೈರ್ಯ ಇದ್ದಿದ್ದರೆ ರಾಮ ಮಂದಿರ ನಿರ್ಮಿಸುತ್ತಿದ್ದರು. ರಾಮ ಮಂದಿರ ನಿರ್ಮಾಣಕ್ಕೆ ಹಾದಿ ಮಾಡಿಕೊಡಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT