ವಿವಿಪ್ಯಾಟ್ ಕುರಿತು ಮತ್ತೆ ಸುಪ್ರೀಂ ಮೆಟ್ಟಿಲೇರಲು ಸಜ್ಜುಗೊಂಡ ವಿಪಕ್ಷಗಳು! 
ದೇಶ

ವಿವಿಪ್ಯಾಟ್ ಕುರಿತು ಮತ್ತೆ ಸುಪ್ರೀಂ ಮೆಟ್ಟಿಲೇರಲು ಸಜ್ಜುಗೊಂಡ ವಿಪಕ್ಷಗಳು!

ಮತಯಂತ್ರಗಳ ವಿಶ್ವಾಸಾರ್ಹತೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ವಿವಿಪ್ಯಾಟ್ ಎಣಿಕೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಲು ವಿಪಕ್ಷಗಳು ಸಜ್ಜುಗೊಂಡಿವೆ.

ನವದೆಹಲಿ: ಮತಯಂತ್ರಗಳ ವಿಶ್ವಾಸಾರ್ಹತೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ವಿವಿಪ್ಯಾಟ್ ಎಣಿಕೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಲು ವಿಪಕ್ಷಗಳು ಸಜ್ಜುಗೊಂಡಿವೆ. 
ಕಾಂಗ್ರೆಸ್, ತೆಲುಗುದೇಶಂ, ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷ, ಕಮ್ಯುನಿಸ್ಟ್ ಪಕ್ಷಗಳು ಈ ಬಗ್ಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಶೇ.50 ರಷ್ಟು ವಿವಿಪ್ಯಾಟ್ ಚೀಟಿಗಳನ್ನು ಎಣಿಕೆ ಮಾಡಬೇಕೆಂಬ ತಮ್ಮ ಹಳೆಯ ಬೇಡಿಕೆಯನ್ನು ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮುಂದಿಡಲು ಸಜ್ಜುಗೊಂಡಿವೆ.
ಬಿಜೆಪಿ ಮತಯಂತ್ರಗಳನ್ನು ಪ್ರೋಗ್ರಾಮಿಂಗ್ ಮಾಡಿದೆ ಎಂದು ಆರೋಪಿಸಿದ್ದರೆ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಶೇ.50 ರಷ್ಟು ವಿವಿಪ್ಯಾಟ್ ಗಳನ್ನು ಎಣಿಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 
ಈ ಹಿಂದೆ ವಿವಿಪ್ಯಾಟ್ ಎಣಿಕೆಯನ್ನು ಹೆಚ್ಚಿಸುವುದಕ್ಕೆ ಸಮ್ಮತಿಸಿದ್ದ ಸುಪ್ರೀಂ ಕೋರ್ಟ್ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದರ ಬದಲು 5 ಮತಗಟ್ಟೆಗಳಲ್ಲಿ ವಿವಿಪ್ಯಾಟ್ ಸ್ಯಾಂಪಲ್ಎಣಿಕೆ ಮಾಡುವಂತೆ ಆಯೋಗಕ್ಕೆ ಸೂಚನೆ ನೀಡಿತ್ತು. ಆದರೆ ಶೇ.50 ರಷ್ಟು ವಿವಿಪ್ಯಾಟ್ ಎಣಿಕೆ ಮಾಡಬೇಕೆಂದು ಪಟ್ಟು ಹಿಡಿದಿದ್ದ ವಿಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿತ್ತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT