ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಜ್ಞಾ ಸಿಂಗ್ ಸ್ಪರ್ಧೆ? 
ದೇಶ

ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಜ್ಞಾ ಸಿಂಗ್ ಸ್ಪರ್ಧೆ?

ಲೋಕಸಭಾ ಚುನಾವಣೆ ಕಾವು ಏರಿಕೆಯಾಗುತ್ತಿದ್ದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರ ಹೆಚ್ಚು ಗಮನ ಸೆಳೆಯುತ್ತಿರುವ ಕ್ಷೇತ್ರಗಳ ಪೈಕಿ ಗುರುತಿಸಿಕೊಂಡಿದೆ.

ಭೋಪಾಲ್: ಲೋಕಸಭಾ ಚುನಾವಣೆ ಕಾವು ಏರಿಕೆಯಾಗುತ್ತಿದ್ದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರ ಹೆಚ್ಚು ಗಮನ ಸೆಳೆಯುತ್ತಿರುವ ಕ್ಷೇತ್ರಗಳ ಪೈಕಿ ಗುರುತಿಸಿಕೊಂಡಿದೆ. 
ಬಿಜೆಪಿ ಭೋಪಾಲ್ ನಿಂದ ಸಾಧ್ವಿ ಪ್ರಜ್ಞಾ  ಸಿಂಗ್ ನ್ನು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಕಣಕ್ಕಿಳಿಸುವ ಸಾಧ್ಯತೆ ಇದೆ.  ಇದೇ ವೇಳೆ ಬಿಜೆಪಿ ಮಧ್ಯಪ್ರದೇಶದ ಸಾಗರ್, ವಿದಿಶಾ, ಗುನಾ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದೆ. 
ರಮಾಕಾಂತ್ ಭಾರ್ಗವ್ ಗೆ ವಿದಿಶಾದಿಂದ ಟಿಕೆಟ್ ಸಿಗುವ ಸಾಧ್ಯತೆ ಇದ್ದರೆ ಸಾಗರ್ ಹಾಗೂ ಗುನಾ ಲೋಕಸಭಾ ಕ್ಷೇತ್ರದಿಂದ ರಾಜ್ ಬಹದ್ದೂರ್ ಸಿಂಗ್ ಹಾಗೂ ಕೆಪಿ ಯಾದವ್ ಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ.
ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಕೆಳಿಬರುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಜ್ಞಾ  ಸಿಂಗ್ ಬಿಜೆಪಿ ಟಿಕೆಟ್ ನೀಡಿದರೆ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸುವುದಾಗಿ ಹೇಳಿದ್ದಾರೆ. 
ದಿಗ್ವಿಜಯ್ ಸಿಂಗ್ ದೇಶದ ವಿರುದ್ಧ ಮಾತನಾಡುತ್ತಾರೆ. ನಾನು ರಾಷ್ಟ್ರೀಯವಾದಿ ಹೀಗಾಗಿ ದಿಗ್ವಿಜಯ್ ಸಿಂಗ್ ಅವರನ್ನು ಎದುರಿಸುವುದು ನನಗೆ ಕಷ್ಟವಾಗುವುದಿಲ್ಲ ಎಂದು ಸಾಧ್ವಿ ಹೇಳಿದ್ದಾರೆ. 
ದಿಗ್ವಿಜಯ್ ಸಿಂಗ್ ನ ನೈಜ ಮುಖ ಎಲ್ಲರಿಗೂ ತಿಳಿದಿದೆ. ಅವರನ್ನು ಎದುರಿಸುವುದು ಕಷ್ಟದ ವಿಷಯವಲ್ಲ ಎಂದು ಸಾಧ್ವಿ ಹೇಳಿದ್ದಾರೆ. 
2008 ರಲ್ಲಿ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ  ಸಿಂಗ್ ಗೆ ಇನ್ನಷ್ಟೇ ಕ್ಲೀನ್ ಚಿಟ್ ಸಿಗಬೇಕಿದೆ. 1989 ರ ನಂತರ ಕಾಂಗ್ರೆಸ್ ಭೋಪಾಲ್ ಲೋಕಸಭಾ ಕ್ಷೇತ್ರವನ್ನು ಗೆದ್ದಿಲ್ಲ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 3.7 ಲಕ್ಷ ಮತಗಳಿಂದ ಗೆದ್ದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT