ನರೇಂದ್ರ ಮೋದಿ-ಇಮ್ರಾನ್ ಖಾನ್ 
ದೇಶ

ಭಾರತ ಮತ್ತು ಪಾಕಿಸ್ತಾನ ಎಂದೆಂದಿಗೂ ದೂರವಿರಲು ಸಾಧ್ಯವಿಲ್ಲ: ಪಾಕ್ ಸಚಿವ ಖುರೇಷಿ

ಭಾರತ ಮತ್ತು ಪಾಕಿಸ್ತಾನ ನೆರೆಹೊರೆಯ ರಾಷ್ಟ್ರಗಳಾಗಿದ್ದು, ಪರಸ್ಪರ ದೂರವಿರಲು ಸಾಧ್ಯವಿಲ್ಲ ಮತ್ತು ಉಭಯ ದೇಶಗಳ ನಡುವಿನ ಎಲ್ಲ ಬಿಕ್ಕಟ್ಟು ಪರಿಹಾರಕ್ಕೆ...

ಇಸ್ಲಾಮಾಬಾದ್‌: ಭಾರತ ಮತ್ತು ಪಾಕಿಸ್ತಾನ ನೆರೆಹೊರೆಯ ರಾಷ್ಟ್ರಗಳಾಗಿದ್ದು, ಪರಸ್ಪರ ದೂರವಿರಲು ಸಾಧ್ಯವಿಲ್ಲ ಮತ್ತು ಉಭಯ ದೇಶಗಳ ನಡುವಿನ ಎಲ್ಲ ಬಿಕ್ಕಟ್ಟು ಪರಿಹಾರಕ್ಕೆ ಮಾತುಕತೆಗೆ ಮುಂದಾಗಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಮಹಮ್ಮದ್‌ ಖುರೇಷಿ ಹೇಳಿದ್ದಾರೆ.
‘ಭೌಗೋಳಿಕವಾಗಿ ಭಾರತ ಪಾಕಿಸ್ತಾನದೊಂದಿಗೆ ಸಾಮಾನ್ಯ ಗಡಿ, ವಾತಾವರಣ, ಸಂಸ್ಕೃತಿ, ಭಾಷೆ ಮತ್ತು ನದಿಗಳ ಮೂಲಕ ಸಂಪರ್ಕ ಹೊಂದಿದೆ’ ಎಂದು ಖುರೇಷಿ ಸಂವಾದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.
ಪರಮಾಣು ಶಸ್ತ್ರಾಸ್ತ್ರ ಹೊಂದಿರುವ ಉಭಯ ರಾಷ್ಟ್ರಗಳೂ ಮಾತುಕತೆಯ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಯುದ್ಧ ವಿನಾಶಕಾರಿಯಾಗಿದ್ದು, ಅದನ್ನು ಆಯ್ಕೆಯಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಬ್ರಿಟನ್‌ ಮತ್ತು ಜರ್ಮನಿ ನಡುವಿನ ಸಂಬಂಧವನ್ನು ನೆನಪಿಸಿಕೊಂಡ ಅವರು, ಅದು ಎರಡನೇ ವಿಶ್ವ  ಮಹಾಯುದ್ಧಕ್ಕೆ ಕಾರಣವಾಯಿತು. ಆದರೆ ಇಂದು ಅವುಗಳು ಯೂರೋಪಿಯನ್‌ ಒಕ್ಕೂಟದ ಅಡಿಯಲ್ಲಿ ಸಂಪರ್ಕ ಹೊಂದಿದ್ದು, ಆರ್ಥಿಕ ಹಿತಾಸಕ್ತಿಯೊಂದಿಗೆ ಒಗ್ಗೂಡಿ ಕೆಲಸ ಮಾಡುತ್ತಿವೆ ಎಂದು ಉದಾಹರಣೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT