ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ಲಿಬಿಯಾ ರಾಜಧಾನಿ ತ್ರಿಪೊಲಿಯಲ್ಲಿ ಉದ್ವಿಗ್ನ ಸ್ಥಿತಿ: ತಕ್ಷಣವೇ ನಗರ ತೊರೆಯುವಂತೆ ಭಾರತೀಯರಿಗೆ ಸುಷ್ಮಾ ಸ್ವರಾಜ್ ಮನವಿ

ಲಿಬಿಯಾ ರಾಜಧಾನಿ ಟ್ರಿಪೊಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಅಲ್ಲಿ ಸಿಲುಕಿ ಹಾಕಿಕೊಂಡಿರುವ 500ಕ್ಕೂ ಹೆಚ್ಚು ಭಾರತೀಯರು ಸುರಕ್ಷತೆ ದೃಷ್ಟಿಯಿಂದ ನಗರವನ್ನು ತಕ್ಷಣವೇ ತೊರೆಯುವಂತೆ ...

ನವದೆಹಲಿ: ಲಿಬಿಯಾ ರಾಜಧಾನಿ ಟ್ರಿಪೊಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಅಲ್ಲಿ ಸಿಲುಕಿ ಹಾಕಿಕೊಂಡಿರುವ 500ಕ್ಕೂ ಹೆಚ್ಚು ಭಾರತೀಯರು ಸುರಕ್ಷತೆ ದೃಷ್ಟಿಯಿಂದ ನಗರವನ್ನು ತಕ್ಷಣವೇ ತೊರೆಯುವಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕರೆ ನೀಡಿದ್ದಾರೆ.
ಲಿಬಿಯಾ ರಾಜಧಾನಿಯಲ್ಲಿ ಭಾರತೀಯರು ಸಿಲುಕಿ ಹಾಕಿಕೊಂಡಿದ್ದರೆ ಅವರು ತಕ್ಷಣವೇ ನಗರ ತೊರೆದು ಹೊರಬರಲಿ, ನಿಧಾನ ಮಾಡಿದರೆ ನಂತರ ನಮಗೆ ಅವರನ್ನು ಸ್ಥಳಾಂತರ ಮಾಡಲು ಸಾಧ್ಯವಾಗದಿರಬಹುದು ಎಂದು ಟ್ವೀಟ್ ಮಾಡಿದ್ದಾರೆ.
ವಿಶ್ವಸಂಸ್ಥೆ ಬೆಂಬಲಿತ ಪ್ರಧಾನ ಮಂತ್ರಿ ಫಯೇಝ್ ಅಲ್ ಸರ್ರಜ್ ಅವರನ್ನು ಅಧಿಕಾರದಿಂದ ಕೆಳಗಿಳಿಸುವಂತೆ ಲಿಬಿಯಾದ ಮಿಲಿಟರಿ ಕಮಾಂಡರ್ ಖಲಿಫಾ ಹಫ್ತರ್ ಅವರ ಪಡೆ ದಾಳಿ ನಡೆಸಲು ಆರಂಭಿಸಿದ ನಂತರ ಕಳೆದ ಎರಡು ವಾರಗಳಲ್ಲಿ ಟ್ರಿಪೊಲಿಯಲ್ಲಿ ನಡೆದ ದಾಳಿಯಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಅಲ್ಲಿನ ಪರಿಸ್ಥಿತಿ ಸದ್ಯ ಬಿಗುವಿನಿಂದ ಕೂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT