ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ಲಿಬಿಯಾ ರಾಜಧಾನಿ ತ್ರಿಪೊಲಿಯಲ್ಲಿ ಉದ್ವಿಗ್ನ ಸ್ಥಿತಿ: ತಕ್ಷಣವೇ ನಗರ ತೊರೆಯುವಂತೆ ಭಾರತೀಯರಿಗೆ ಸುಷ್ಮಾ ಸ್ವರಾಜ್ ಮನವಿ

ಲಿಬಿಯಾ ರಾಜಧಾನಿ ಟ್ರಿಪೊಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಅಲ್ಲಿ ಸಿಲುಕಿ ಹಾಕಿಕೊಂಡಿರುವ 500ಕ್ಕೂ ಹೆಚ್ಚು ಭಾರತೀಯರು ಸುರಕ್ಷತೆ ದೃಷ್ಟಿಯಿಂದ ನಗರವನ್ನು ತಕ್ಷಣವೇ ತೊರೆಯುವಂತೆ ...

ನವದೆಹಲಿ: ಲಿಬಿಯಾ ರಾಜಧಾನಿ ಟ್ರಿಪೊಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಅಲ್ಲಿ ಸಿಲುಕಿ ಹಾಕಿಕೊಂಡಿರುವ 500ಕ್ಕೂ ಹೆಚ್ಚು ಭಾರತೀಯರು ಸುರಕ್ಷತೆ ದೃಷ್ಟಿಯಿಂದ ನಗರವನ್ನು ತಕ್ಷಣವೇ ತೊರೆಯುವಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕರೆ ನೀಡಿದ್ದಾರೆ.
ಲಿಬಿಯಾ ರಾಜಧಾನಿಯಲ್ಲಿ ಭಾರತೀಯರು ಸಿಲುಕಿ ಹಾಕಿಕೊಂಡಿದ್ದರೆ ಅವರು ತಕ್ಷಣವೇ ನಗರ ತೊರೆದು ಹೊರಬರಲಿ, ನಿಧಾನ ಮಾಡಿದರೆ ನಂತರ ನಮಗೆ ಅವರನ್ನು ಸ್ಥಳಾಂತರ ಮಾಡಲು ಸಾಧ್ಯವಾಗದಿರಬಹುದು ಎಂದು ಟ್ವೀಟ್ ಮಾಡಿದ್ದಾರೆ.
ವಿಶ್ವಸಂಸ್ಥೆ ಬೆಂಬಲಿತ ಪ್ರಧಾನ ಮಂತ್ರಿ ಫಯೇಝ್ ಅಲ್ ಸರ್ರಜ್ ಅವರನ್ನು ಅಧಿಕಾರದಿಂದ ಕೆಳಗಿಳಿಸುವಂತೆ ಲಿಬಿಯಾದ ಮಿಲಿಟರಿ ಕಮಾಂಡರ್ ಖಲಿಫಾ ಹಫ್ತರ್ ಅವರ ಪಡೆ ದಾಳಿ ನಡೆಸಲು ಆರಂಭಿಸಿದ ನಂತರ ಕಳೆದ ಎರಡು ವಾರಗಳಲ್ಲಿ ಟ್ರಿಪೊಲಿಯಲ್ಲಿ ನಡೆದ ದಾಳಿಯಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಅಲ್ಲಿನ ಪರಿಸ್ಥಿತಿ ಸದ್ಯ ಬಿಗುವಿನಿಂದ ಕೂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT