ರಂಜನ್ ಗೊಗೋಯ್ 
ದೇಶ

ಲೈಂಗಿಕ ಕಿರುಕುಳ ಆಪಾದನೆಯ ಹಿಂದೆ ಬಹುದೊಡ್ಡ ಶಕ್ತಿಯ ಕೈವಾಡ , ನ್ಯಾಯಾಂಗದ ಸ್ವಾತಂತ್ರ್ಯ ಅಪಾಯದಲ್ಲಿ: ಗೊಗೋಯ್

ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ಮಾಧ್ಯಮದ ಬುದ್ಧಿಮತ್ತೆಗೆ ಇದನ್ನು ಬಿಡುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ:  ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ಮಾಧ್ಯಮದ ಬುದ್ಧಿಮತ್ತೆಗೆ ಇದನ್ನು ಬಿಡುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮಂಡಳಿಯ ಸ್ವಾತಂತ್ರವು  'ತೀವ್ರವಾದ' ಅಪಾಯದಲ್ಲಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದ್ದು ಇದೀಗ ಈ ಸಂಬಂಧ ವಿಚಾರಣೆಯನ್ನು ನ್ಯಾಯಾಲಯ ಮುಕ್ತಾಯಗೊಳಿಸಿದೆ.
"ನಾನು ನ್ಯಾಯಪೀಠದಲ್ಲಿ ಕುಳಿತು ನನ್ನ ಕರ್ತವ್ಯವನ್ನು ಭಯವಿಲ್ಲದೆ ಮುಂದುವರಿಸುತ್ತೇನೆ. ನನ್ನ ಅಧಿಕಾರಾವಧಿಯು ಮುಗಿಯುವವರೆಗೆ  ನನ್ನನ್ನು ಯಾರೂ ಏನೇ ಕಾರಣಕ್ಕೆ ಖರೀದಿಸಲು ಬರುವುದಿಲ್ಲ.
ಈ ಸುದ್ದಿ  ಸತ್ಯದಿಂದ ಬಹುದೂರವಿದೆ. ನ್ಯಾಯಾಂಗವನ್ನು ಬಲಿಪಶುವಾಗಿ ಮಾಡುವ ಹುನ್ನಾರ ಇದರ ಹಿಂದಿದೆ, ಆದರೆ ಇದನ್ನು ಹಾಗೆ ಮಾಡಲು ಆಗುವುದಿಲ್ಲ. ಸ್ವತಂತ್ರವಾಗಿ ಉಳಿದಿದ್ದ ನ್ಯಾಯಾಂಗವನ್ನು ಅಸ್ಥಿರಗೊಳಿಸಲು ದೊಡ್ಡ ಪಿತೂರಿ ನಡೆದಿದೆ.ಈ ಮಹಿಳೆ ಮೇಲೆಯೂ ಹಿಂಸಾಚಾರ ನಡೆದಿದ್ದು ಈಗ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಹೊರಿಸುತ್ತಿದ್ದಾರೆ ಎಂದು ಗೊಗೋಯ್ ಹೇಳೀದ್ದಾರೆ.
 "ಇದು ನಂಬಲಾಗದ ಆರೋಪ, , 20 ವರ್ಷಗಳ ನಿಸ್ವಾರ್ಥ ಸೇವೆಯ ನಂತರ ನ್ಯಾಯಾಧೀಶನಾಗಿ ನೇಮಕವಾಗಿದ್ದು ನನ್ನ ಬ್ಯಾಂಕ್ ಬ್ಯಾಲೆನ್ಸ್  6.80 ಲಕ್ಷ ರು. ಆಗಿದೆ. ಹಣದಿಂದ ಯಾರೂ ನನ್ನನ್ನು ಖರೀದಿಸಲು ಬರುವುದಿಲ್ಲ.ಹಾಗಾಗಿ ಅವರು ಮತ್ತೇನಾದರೂ ದಾರಿ ಹುಡುಕಬೇಕು. ಈಗ ಇದನ್ನು ಹುಡುಕಿದ್ದಾರೆ." ಗೊಗೋಯ್ ಹೇಳಿದ್ದಾರೆ.
"ಸಿಜೆಐ ಕಛೇರಿಯನ್ನು ನಿಷ್ಕ್ರಿಯಗೊಳಿಸಲು ಅವರು ಬಯಸುತ್ತಿದ್ದಾರೆ, 20 ವರ್ಷಗಳ ಸೇವೆಯ ಬಳಿಕ ಭಾರತದ ಮುಖ್ಯ ನ್ಯಾಯಮೂರ್ತಿಗೆ ಇಂತಹಾ ಉಡುಗೊರೆ ಸಿಕ್ಕುತ್ತಿದೆ" ಗೊಗೊಯ್ ಬೇಸರದಿಂದ ನುಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT