ಕಮಲ್ ನಾಥ್ 
ದೇಶ

ಕಾಂಗ್ರೆಸ್ ಬಹುಮತ ಪಡೆಯಲ್ಲ, ಮೈತ್ರಿ ಅತ್ಯವಶ್ಯಕ- ಕಮಲ್ ನಾಥ್

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಸಾಧ್ಯತೆ ಕಡಿಮೆ ಇದ್ದು, ಕೇಂದ್ರದಲ್ಲಿ ಅಧಿಕಾರ ರಚಿಸಲು ಚುನಾವಣೆ ನಂತರವೂ ಮೈತ್ರಿ ಅಗತ್ಯವಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.

ಮಧ್ಯಪ್ರದೇಶ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಸಾಧ್ಯತೆ ಕಡಿಮೆ ಇದ್ದು, ಕೇಂದ್ರದಲ್ಲಿ ಅಧಿಕಾರ ರಚಿಸಲು ಚುನಾವಣೆ ನಂತರವೂ ಮೈತ್ರಿ ಅಗತ್ಯವಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.

ಬಿಜೆಪಿ ಬಹುಮತ ಪಡೆಯದಿದ್ದರೆ  ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಅದನ್ನು ಹೊರತುಪಡಿಸಿದತೆ ಮೈತ್ರಿ ರಚನೆಗೆ ಇನ್ನಿತರ ದೊಡ್ಡ ರಾಜಕೀಯ ಪಕ್ಷಗಳಿಲ್ಲ ಎಂದು ಅವರು ಹೇಳಿದ್ದಾರೆ.

ನಾವು ಉತ್ತಮವಾದ ಕೆಲಸವನ್ನೇ ಮಾಡುತ್ತಿದ್ದೇವೆ. ಆದರೆ, ಬಹುಮತ ಗಳಿಸುವಲ್ಲಿ ವಿಫಲವಾದಲ್ಲಿ  ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರ ಇಡಲು ಮೈತ್ರಿ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದಿದ್ದಾರೆ.

ಪ್ರಸ್ತುತ ಬಿಜೆಪಿ ವಿರೋಧ, ಬಿಜೆಪಿ ಪರ ಎಂಬ ಎರಡು ವಿಧಗಳಿವೆ. ಬಿಜೆಪಿ ಪರ ಸಂಖ್ಯೆ ಕಡಿಮೆ ಇದೆ . ಆದರೆ, ಬಿಜೆಪಿ ವಿರೋಧಿ ಗುಂಪು  ಅದರ ರಾಜಕೀಯ ನೀತಿ ವಿರುದ್ಧವಾಗಿರುವುದಾಗಿ . ಕಾಂಗ್ರೆಸ್  ಪಕ್ಷಕ್ಕೆ ಬಹುಮತ ಬಂದರೆ ರಾಹುಲ್ ಗಾಂಧಿ ಖಂಡತವಾಗಿ ಪ್ರಧಾನಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT