ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 
ದೇಶ

'ಚೌಕೀಧಾರ್ ಚೋರ್ ಹೇ' ಹೇಳಿಕೆ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ವತಃ ಸುಪ್ರೀಂ ಕೋರ್ಟ್ ಚೌಕಿದಾರ್ ಚೋರ್ ಹೈ ಎಂದು ತೀರ್ಪು ....

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ವತಃ ಸುಪ್ರೀಂ ಕೋರ್ಟ್ ಚೌಕಿದಾರ್ ಚೋರ್ ಹೈ ಎಂದು ತೀರ್ಪು ನೀಡಿದೆ ಎಂದು ಸುಪ್ರೀಂ ಕೋರ್ಟ್ ನ ತೀರ್ಪನ್ನು ತಪ್ಪಾಗಿ ವ್ಯಾಖ್ಯಾನಿಸಿದ್ದಾರೆ ಎಂಬ ಆಕ್ಷೇಪಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೊಟೀಸ್ ಜಾರಿ ಮಾಡಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ರಾಹುಲ್ ಗಾಂಧಿಗೆ ಇಂದು ನೊಟೀಸ್ ಜಾರಿ ಮಾಡಿ ಏಪ್ರಿಲ್ 30ಕ್ಕೆ ಅರ್ಜಿ ವಿಚಾರಣೆಯನ್ನು ನಿಗದಿಪಡಿಸಿದೆ. ನ್ಯಾಯಾಲಯ ಅಂದೇ ರಫೆಲ್ ಪುನರ್ ಪರಿಶೀಲನಾ ಅರ್ಜಿಯನ್ನು ಸಹ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಫ್ರಾನ್ಸ್ ಸರ್ಕಾರದೊಂದಿಗೆ ಭಾರತ ಸರ್ಕಾರ ಮಾಡಿಕೊಂಡಿರುವ ರಫೆಲ್ ಯುದ್ಧ ವಿಮಾನ ಒಪ್ಪಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಕ್ಷೇಪವೆತ್ತಿ ಸುಪ್ರೀಂ ಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿತ್ತು.
ಮಾಧ್ಯಮಗಳಿಗೆ ದೊರೆತ ದಾಖಲೆಗಳನ್ನು ಸಾಕ್ಷ್ಯವಾಗಿ ಪರಿಗಣಿಸಬಹುದು ಎಂದು ಸುಪ್ರೀಂಕೋರ್ಟ್‌ ಏಪ್ರಿಲ್‌ 10ರ ವಿಚಾರಣೆ ವೇಳೆ ಹೇಳಿದ್ದನ್ನು, ಸುಪ್ರೀಂಕೋರ್ಟ್‌ ಕೂಡಾ ''ಚೌಕಿದಾರ್‌ (ಪ್ರಧಾನಿ ಮೋದಿ) ಚೋರ್‌ ಹೈ ಎಂದು ತೀರ್ಪು ನೀಡಿದೆ ಎಂದು ರಾಹುಲ್‌ ವ್ಯಾಖ್ಯಾನಿಸಿದ್ದರು. ಈ ಸಂಬಂಧ ಬಿಜೆಪಿ ನಾಯಕಿ ಮೀನಾಕ್ಷಿ ಲೇಖಿ ಅವರು ರಾಹುಲ್‌ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ದಾವೆ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ ಏಪ್ರಿಲ್‌ 22ರೊಳಗೆ ವಿವರಣೆ ನೀಡುವಂತೆ ರಾಹುಲ್‌ ಗಾಂಧಿ ಅವರಿಗೆ ನೋಟಿಸ್‌ ಜಾರಿ ಮಾಡಿತ್ತು. ನಿನ್ನೆ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಅವರ ನೇತೃತ್ವದ ಪೀಠದ ಮುಂದೆ ರಾಹುಲ್‌ ಅವರು ಅಫಿಡವಿಟ್‌ ಸಲ್ಲಿಸಿ  ಸುಪ್ರೀಂ ಕೋರ್ಟ್ ತೀರ್ಪನ್ನು ತಪ್ಪಾಗಿ ವ್ಯಾಖ್ಯಾನ ಮಾಡಿರುವುದು ನಿಜವೆಂದು  ಒಪ್ಪಿಕೊಂಡಿದ್ದಾರೆ.
ಆದರೆ, ಇಂದು ನಡೆದ ವಿಚಾರಣೆ ವೇಳೆ ಮೀನಾಕ್ಷಿ ಲೇಖಿ ಅವರ ಪರ ವಾದ ಮಂಡಿಸಿದ ಹಿರಿಯ ಅಡ್ವೊಕೇಟ್ ಮುಕುಲ್ ರೊಹ್ಟಗಿ, ರಾಹುಲ್ ಗಾಂಧಿ ಸಲ್ಲಿಸಿರುವ ಅಫಿಡವಿಟ್ಟು ಕೇವಲ ಬಾಯಿ ಮಾತಿಗೆ ತಪ್ಪಾಗಿ ಒಪ್ಪಿಕೊಂಡಿದ್ದಾಗಿದ್ದು ಅವರು ಕ್ಷಮೆ ಕೇಳಿಲ್ಲ ಎಂದು ಆಕ್ಷೇಪವೆತ್ತಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT