ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರದಲ್ಲಿ ಬಾಲ ಬಿಚ್ಚಿದ ಇಬ್ಬರು ಉಗ್ರರ ಮಟ್ಟ ಹಾಕಿದ ಸೇನೆ, ತೀವ್ರ ಶೋಧ ಕಾರ್ಯಾಚರಣೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ಗರನ್ನು ಭಾರತೀಯ ಸೈನಿಕರು ಹೆಡೆಮುರಿ ಕಟ್ಟಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ಗರನ್ನು ಭಾರತೀಯ ಸೈನಿಕರು ಹೆಡೆಮುರಿ ಕಟ್ಟಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ ಬೆಹ್ರಾ ಪ್ರಾಂತ್ಯದ ಬಗೇಂದರ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದ್ದು, ಮನೆಯೊಂದರಲ್ಲಿ ಅಡಗಿದ್ದ ಇಬ್ಬರು ಉಗ್ರರನ್ನು ಸೈನಿಕರು ಹೊಡೆದುರುಳಿಸಿದ್ದಾರೆ.
ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಸೈನಿಕರು ಕೂಡಲೇ ಘಟನಾ ಸ್ಥಳವನ್ನು ಸುತ್ತುವರಿದ ಸೇನೆ ಉಗ್ರರ ಬಂಧನಕ್ಕೆ ಮುಂದಾಗಿದೆ. ಈ ವೇಳೆ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸೈನಿಕರೂ ಕೂಡ ಈ ವೇಳೆ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ಘಟನಾ ಸ್ಥಳದಲ್ಲಿ ಸೈನಿಕರು ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಸುತ್ತಮುತ್ತಲಿನ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT