ಸಂಗ್ರಹ ಚಿತ್ರ 
ದೇಶ

'ತಲೆಮರೆಸಿಕೊಂಡ ಅಪರಾಧಿ' ಎಂದು ಘೋಷಿಸಿರುವುದು ನನಗೆ ಆರ್ಥಿಕ ಮರಣದಂಡನೆ ಕೊಟ್ಟಂತೆ: ವಿಜಯ್ ಮಲ್ಯ

ನನ್ನನ್ನು ತಲೆಮರೆಸಿಕೊಂಡ ಆರ್ಥಿಕ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಘೋಷಿಸಿರುವುದು ನನ್ನ ಪಾಲಿಗೆ ಆರ್ಥಿಕ ಮರಣದಂಡನೆಯಾದಂತಾಗಿದೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.

ಮುಂಬೈ: ನನ್ನನ್ನು ತಲೆಮರೆಸಿಕೊಂಡ ಆರ್ಥಿಕ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಘೋಷಿಸಿರುವುದು ನನ್ನ ಪಾಲಿಗೆ ಆರ್ಥಿಕ ಮರಣದಂಡನೆಯಾದಂತಾಗಿದೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.
ತಲೆಮರೆಸಿಕೊಂಡ ಆರ್ಥಿಕ ಅಪರಾಧಿಗಳ ಕಾಯ್ದೆಯ ಕೆಲ ಕಾನೂನುಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮಲ್ಯ ಪರ ವಕೀಲರು ಈ ಹೇಳಿಕೆ ನೀಡಿದ್ದು, 'ನನ್ನನ್ನು ಆರ್ಥಿಕ ಅಪರಾಧಿ ಎಂದು ಘೋಷಣೆ ಮಾಡಿರುವುದು ಮತ್ತು ತನ್ನ ಆಸ್ತಿಗಳನ್ನ ಮುಟ್ಟುಗೋಲು ಹಾಕಿಕೊಂಡಿರುವುದು ತನ್ನ ಪಾಲಿಗೆ ಆರ್ಥಿಕ ಮರಣದಂಡನೆಯಾದಂತಾಗಿದೆ ಎಂದು ಮಲ್ಯ ಹೇಳಿಕೆಯನ್ನು ದಾಖಲಿಸಿದ್ದಾರೆ.
'ನನ್ನ ಸಾಲಗಳು ಹಾಗೂ ಅದರ ಮೇಲಿನ ಬಡ್ಡಿ ಮೊತ್ತವು ಹೆಚ್ಚಾಗುತ್ತಿವೆ. ಈ ಸಾಲಗಳನ್ನ ತೀರಿಸುವಷ್ಟು ಆಸ್ತಿಗಳು ನನ್ನಲ್ಲಿವೆ. ಆದರೆ, ಈ ಆಸ್ತಿ ಬಳಸಿ ಸಾಲ ತೀರಿಸಲು ಸರ್ಕಾರ ಅವಕಾಶ ನೀಡುತ್ತಿಲ್ಲ. ನನ್ನ ಆಸ್ತಿಗಳ ಮೇಲೆ ನನಗೇ ಅಧಿಕಾರ ಇಲ್ಲದಂತಾಗಿದೆ. ಇದು ನನಗೆ ಆರ್ಥಿಕ ಮರಣ ದಂಡನೆ ನೀಡಿದಂತಾಗಿದೆ' ಎಂದು ಮಲ್ಯ ಪರ ವಕೀಲ ಅಮಿತ್ ದೇಸಾಯಿ ಅವರು ಹೈಕೋರ್ಟ್ ಪೀಠಕ್ಕೆ ತಿಳಿಸಿದ್ದಾರೆ.
ಹಾಗೆಯೇ, ದೇಶಾದ್ಯಂತ ಇರುವ ಮಲ್ಯ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಕ್ರಮಕ್ಕೆ ತಡೆ ನೀಡಬೇಕೆಂದೂ ವಕೀಲ ಅಮಿತ್ ದೇಸಾಯಿ ಮನವಿ ಮಾಡಿಕೊಂಡರು. 
ಆದರೆ, ನ್ಯಾ| ರಂಜಿತ್ ಮೋರೆ ಮತ್ತು ನ್ಯಾ. ಭಾರತಿ ದಾಂಗ್ರೆ ಅವರಿದ್ದ ಬಾಂಬೆ ಹೈಕೋರ್ಟ್ ಪೀಠವು ವಿಜಯ್ ಮಲ್ಯ ಅವರ ಮನವಿಯನ್ನು ಪುರಸ್ಕರಿಸಲು ನಿರಾಕರಿಸಿತು. 2018ರ ಆಗಸ್ಟ್​ ತಿಂಗಳಲ್ಲಿ ಕೇಂದ್ರ ಸರ್ಕಾರವು ತಲೆ ಮರೆಸಿಕೊಂಡ ಆರ್ಥಿಕ ಅಪರಾಧಿಗಳ ಕಾಯ್ದೆ (ಫುಜಿಟಿವ್ ಎಕನಾಮಿಕ್ ಅಫೆಂಡರ್ಸ್ ಆ್ಯಕ್ಟ್) ರೂಪಿಸಿತ್ತು. ಇದರ ಆಧಾರದ ಮೇಲೆ ಮುಂಬೈನ ವಿಶೇಷ ನ್ಯಾಯಾಲಯವೊಂದು ಇದೇ ಜನವರಿ ತಿಂಗಳಲ್ಲಿ ಮಲ್ಯ ಅವರನ್ನು ತಲೆಮರೆಸಿಕೊಂಡ ಆರ್ಥಿಕ ಅಪರಾಧಿ ಎಂದು ಘೋಷಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT