ಲಖನೌ: ಪುಲ್ವಾಮ ದಾಳಿಗೆ ಪ್ರತೀಕಾರವಾಗಿ ಭಾರತ ವೈಮಾನಿಕ ದಾಳಿ ನಡೆಸಿದ ಬೆನ್ನಲ್ಲೇ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಯೋಗಿ ಆದಿತ್ಯನಾಥ್, ಅರವಿಂದ್ ಕೇಜ್ರಿವಾಲ್, ಆರ್ ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗ್ವತ್ ಅವರನ್ನು ಟಾರ್ಗೆಟ್ ಮಾಡಿರುವುದಾಗಿ ಹೇಳಿದೆ.
ಪಾಕ್ ಉಗ್ರ ಸಂಘಟನೆಯಿಂದ ಪ್ರಕಟಗೊಂಡಿರುವ 2 ಪ್ರತ್ಯೇಕ ಪತ್ರಗಳಿಂದ ಈ ಮಾಹಿತಿ ಬಹಿರಂಗಗೊಂಡಿದ್ದು, ಪತ್ರದಲ್ಲಿ ತಮ್ಮ ಮುಂದಿನ ಟಾರ್ಗೆಟ್ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಎಂದು ತಿಳಿಸಲಾಗಿದೆ. ಈ ಮಾಹಿತಿಯನ್ನು ಉತ್ತರ ಪ್ರದೇಶ ಪೊಲೀಸರು ನೀಡಿದ್ದಾರೆ.
ಉತ್ತರಪ್ರದೇಶದ ಶಾಮ್ಲಿ ಹಾಗೂ ಉತ್ತರಾಖಂಡ್ ನ ರೂರ್ಕಿ ರೈಲ್ವೆ ನಿಲ್ದಾಣಗಳಲ್ಲಿ ಜೈಶ್-ಉಗ್ರ ಸಂಘಟನೆಯ ಪತ್ರಗಳು ಲಭ್ಯವಾಗಿದ್ದು, ರೈಲು ನಿಲ್ದಾಣ ಹಾಗೂ ದೇವಾಲಯಗಳನ್ನು ಸ್ಫೋಟಿಸುವುದಾಗಿ ಹೇಳಲಾಗಿದೆ. ಉಗ್ರ ಸಂಘಟನೆಯ ಪತ್ರಗಳು ದೊರೆತ ಹಿನ್ನೆಯಲ್ಲಿ ಉತ್ತರ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos