ಸಂಗ್ರಹ ಚಿತ್ರ 
ದೇಶ

ಜೆಟ್‍ ಏರ್ ವೇಸ್‍ ಅಧೋಗತಿಗೆ ಜೇಟ್ಲಿ, ಸಿನ್ಹಾ ಹೊಣೆ: ಸುಬ್ರಮಣ್ಯನ್‍ ಸ್ವಾಮಿ ಆರೋಪ

ಜೆಟ್‍ ಏರ್ ವೇಸ್‍ ಅಧೋಗತಿಗೆ ಕೇಂದ್ರ ಹಣಕಾಸು ಸಚಿವ ಅರುಣ್‍ ಜೇಟ್ಲಿ ಹಾಗೂ ನಾಗರಿಕ ವಿಮಾನಯಾನ ಖಾತೆ ಸಚಿವ ಜಯಂತ್‍ ಸಿನ್ಹಾ ಕಾರಣರಾಗಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣ್ಯನ್‍ ಸ್ವಾಮಿ ಆರೋಪಿಸಿದ್ದಾರೆ.

ನವದೆಹಲಿ: ಜೆಟ್‍ ಏರ್ ವೇಸ್‍ ಅಧೋಗತಿಗೆ ಕೇಂದ್ರ ಹಣಕಾಸು ಸಚಿವ ಅರುಣ್‍ ಜೇಟ್ಲಿ ಹಾಗೂ ನಾಗರಿಕ ವಿಮಾನಯಾನ ಖಾತೆ ಸಚಿವ ಜಯಂತ್‍ ಸಿನ್ಹಾ ಕಾರಣರಾಗಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣ್ಯನ್‍ ಸ್ವಾಮಿ ಆರೋಪಿಸಿದ್ದಾರೆ.

ಜೆಟ್‍ ಏರ್ ವೇಸ್‍ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿರುವ ಸುಬ್ರಮಣ್ಯನ್‍ ಸ್ವಾಮಿ, ಬಿಜೆಪಿ ಘನತೆಗೆ ಹಾನಿ ಮಾಡಲು ಜೇಟ್ಲಿ ಮತ್ತು ಸಿನ್ಹಾ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸ್ಪೈಸ್‍ ಜೆಟ್‍ಗೆ ಅನುಕೂಲ ಮಾಡಿಕೊಡಲು ಜೆಟ್‍ ಏರ್ ವೇಸ್‍ ಅನ್ನು ಅಧೋಗತಿಗೆ ತಳ್ಳುವ ಪ್ರಯತ್ನಗಳಿಂದ ಹಿಂದೆ ಸರಿಯುವಂತೆ ಜೇಟ್ಲಿ ಮತ್ತು ಸಿನ್ಹಾ ಅವರಿಗೆ ಪ್ರಧಾನಿ ಸೂಚಿಸಬೇಕು. ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಮತ್ತೊಬ್ಬರಿಗೆ ಲಾಭ ಮಾಡಿಕೊಡಲು ಹೊರಟಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅವರು ಟ್ವೀಟ್‍ ಮಾಡಿದ್ದಾರೆ.

ಬುಧವಾರ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಸುರೇಶ್ ಪ್ರಭು ಅವರಿಗೆ ಪತ್ರ ಬರೆದಿದ್ದ ಡಾ.ಸುಬ್ರಮಣ್ಯನ್‍ ಸ್ವಾಮಿ ಅವರು, ಈ ವಿಷಯದ ಕಡೆ ಗಮನ ಹರಿಸುವಂತೆ ಒತ್ತಾಯಿಸಿದ್ದರು.

ಜೆಟ್‍ ಏರ್ ವೇಸ್‍ನ ನಷ್ಟವನ್ನು ಸ್ಪೈಸ್‍ಜೆಟ್‍  ಮತ್ತು ವಿಸ್ತಾರ ಏರ್ ಲೈನ್‍ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಗಂಭೀರ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಜೆಟ್‍ ಏರ್ ವೇಸ್ ಅನ್ನು ಏರ್ ಇಂಡಿಯಾದೊಂದಿಗೆ ವಿಲೀನಗೊಳಿಸುವಂತೆಯೂ ಸುಬ್ರಮಣ್ಯನ್‍ ಸ್ವಾಮಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT