ಸಂಗ್ರಹ ಚಿತ್ರ 
ದೇಶ

ಜೆಟ್‍ ಏರ್ ವೇಸ್‍ ಅಧೋಗತಿಗೆ ಜೇಟ್ಲಿ, ಸಿನ್ಹಾ ಹೊಣೆ: ಸುಬ್ರಮಣ್ಯನ್‍ ಸ್ವಾಮಿ ಆರೋಪ

ಜೆಟ್‍ ಏರ್ ವೇಸ್‍ ಅಧೋಗತಿಗೆ ಕೇಂದ್ರ ಹಣಕಾಸು ಸಚಿವ ಅರುಣ್‍ ಜೇಟ್ಲಿ ಹಾಗೂ ನಾಗರಿಕ ವಿಮಾನಯಾನ ಖಾತೆ ಸಚಿವ ಜಯಂತ್‍ ಸಿನ್ಹಾ ಕಾರಣರಾಗಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣ್ಯನ್‍ ಸ್ವಾಮಿ ಆರೋಪಿಸಿದ್ದಾರೆ.

ನವದೆಹಲಿ: ಜೆಟ್‍ ಏರ್ ವೇಸ್‍ ಅಧೋಗತಿಗೆ ಕೇಂದ್ರ ಹಣಕಾಸು ಸಚಿವ ಅರುಣ್‍ ಜೇಟ್ಲಿ ಹಾಗೂ ನಾಗರಿಕ ವಿಮಾನಯಾನ ಖಾತೆ ಸಚಿವ ಜಯಂತ್‍ ಸಿನ್ಹಾ ಕಾರಣರಾಗಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣ್ಯನ್‍ ಸ್ವಾಮಿ ಆರೋಪಿಸಿದ್ದಾರೆ.

ಜೆಟ್‍ ಏರ್ ವೇಸ್‍ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿರುವ ಸುಬ್ರಮಣ್ಯನ್‍ ಸ್ವಾಮಿ, ಬಿಜೆಪಿ ಘನತೆಗೆ ಹಾನಿ ಮಾಡಲು ಜೇಟ್ಲಿ ಮತ್ತು ಸಿನ್ಹಾ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸ್ಪೈಸ್‍ ಜೆಟ್‍ಗೆ ಅನುಕೂಲ ಮಾಡಿಕೊಡಲು ಜೆಟ್‍ ಏರ್ ವೇಸ್‍ ಅನ್ನು ಅಧೋಗತಿಗೆ ತಳ್ಳುವ ಪ್ರಯತ್ನಗಳಿಂದ ಹಿಂದೆ ಸರಿಯುವಂತೆ ಜೇಟ್ಲಿ ಮತ್ತು ಸಿನ್ಹಾ ಅವರಿಗೆ ಪ್ರಧಾನಿ ಸೂಚಿಸಬೇಕು. ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಮತ್ತೊಬ್ಬರಿಗೆ ಲಾಭ ಮಾಡಿಕೊಡಲು ಹೊರಟಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅವರು ಟ್ವೀಟ್‍ ಮಾಡಿದ್ದಾರೆ.

ಬುಧವಾರ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಸುರೇಶ್ ಪ್ರಭು ಅವರಿಗೆ ಪತ್ರ ಬರೆದಿದ್ದ ಡಾ.ಸುಬ್ರಮಣ್ಯನ್‍ ಸ್ವಾಮಿ ಅವರು, ಈ ವಿಷಯದ ಕಡೆ ಗಮನ ಹರಿಸುವಂತೆ ಒತ್ತಾಯಿಸಿದ್ದರು.

ಜೆಟ್‍ ಏರ್ ವೇಸ್‍ನ ನಷ್ಟವನ್ನು ಸ್ಪೈಸ್‍ಜೆಟ್‍  ಮತ್ತು ವಿಸ್ತಾರ ಏರ್ ಲೈನ್‍ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಗಂಭೀರ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. ಜೆಟ್‍ ಏರ್ ವೇಸ್ ಅನ್ನು ಏರ್ ಇಂಡಿಯಾದೊಂದಿಗೆ ವಿಲೀನಗೊಳಿಸುವಂತೆಯೂ ಸುಬ್ರಮಣ್ಯನ್‍ ಸ್ವಾಮಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT