ಸಂಗ್ರಹ ಚಿತ್ರ 
ದೇಶ

2018-19ರ ಅವಧಿಯಲ್ಲಿ ಭಾರತಕ್ಕೆ ಗರಿಷ್ಠ ಪ್ರಮಾಣದ ವಿದೇಶ ನೇರ ಹೂಡಿಕೆ: ಕೇಂದ್ರ ಸರ್ಕಾರ

2018-19ರ ಅವಧಿಯಲ್ಲಿ ಭಾರತ ದೇಶ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದ ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ನವದೆಹಲಿ: 2018-19ರ ಅವಧಿಯಲ್ಲಿ ಭಾರತ ದೇಶ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದ ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಈ ಬಗ್ಗೆ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರವನ್ನು ಉತ್ತೇಜನಾ ಇಲಾಖೆ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ವಿದೇಶಿ ನೇರ ಹೂಡಿಕೆ ನೀತಿ, ಉದಾರೀಕರಣ ಮತ್ತು ಸುಧಾರಣೆಗಳ (Department for Promotion of Industry and Internal Trade-DPIIT)) ಪರಿಣಾಮ 2018-19 ವಿತ್ತೀಯ ವರ್ಷದಲ್ಲಿ 64.37 ಬಿಲಿಯನ್ ಡಾಲರ್ ವಿದೇಶಿ ಹೂಡಿಕೆ ದೇಶಕ್ಕೆ ಹರಿದು ಬಂದಿದೆ ಎಂದು ಹೇಳಿದೆ. 
ಈ ಹಿಂದಿನ ವಿತ್ತೀಯ ವರ್ಷದಲ್ಲಿ ಭಾರತ 60.97 ಬಿಲಿಯನ್ ಡಾಲರ್ ಹಣ ಭಾರತಕ್ಕೆ ಎಫ್ ಡಿಐ ಮೂಲಕ ಹರಿದು ಬಂದಿತ್ತು. ಇದು ಈ ವರೆಗಿನ ಗರಿಷ್ಟ ಎಫ್ ಡಿಐ ಹೂಡಿಕೆಯಾಗಿತ್ತು. ಆದರೆ 2018-19ರಲ್ಲಿ ಇದನ್ನೂ ಮೀರಿದ ಗರಿಷ್ಠ ಪ್ರಮಾಣದ ವಿದೇಶಿ ನೇರ ಹೂಡಿಕೆ ಹರಿದು ಬಂದಿದೆ ಎಂದು ಹೇಳಿದೆ. ಅಂತೆಯೇ ಕಳೆದ ಐದು ವರ್ಷಗಳಲ್ಲಿ ಭಾರತಕ್ಕೆ ಬಂದಿರುವ ವಿದೇಶಿ ನೇರ ಹೂಡಿಕೆ ಪ್ರಮಾಣ 286 ಬಿಲಿಯನ್ ಡಾಲರ್ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಅಂತೆಯೇ ಕೇವಲ ವಿದೇಶಿ ನೇರ ಹೂಡಿಕೆ ಮಾತ್ರವಲ್ಲದೇ ಅದರ ಮೂಲಕ ಭಾರತಕ್ಕೆ ಉದ್ಯಮ ವಲಯದ ಅತ್ಯಾಧುನಿಕ ತಂತ್ರಜ್ಞಾನಗಳೂ ಕೂಡ ಆಗಮಿಸಿದ್ದು, ಇನ್ನೂ ಸಾಕಷ್ಟು ವಿನೂತನ ತಂತ್ರಜ್ಞಾನಗಳು ಭಾರತದಲ್ಲಿ ಆವಿಷ್ಕಾರಗೊಳ್ಳುತ್ತಿವೆ. ಆ ಮೂಲಕ ಭಾರತದ ಆರ್ಥಿಕತೆ ಅಭಿವೃದ್ಧಿಗೆ ವೇಗ ನೀಡಲಿವೆ ಎಂದು ವರದಿಯಲ್ಲಿ ಅಭಿಪ್ರಾಯಪಡಲಾಗಿದೆ. 
1995ರಲ್ಲಿ ಮೊಟ್ಟ ಮೊದಲ ಬಾರಿಗೆ ಕೇಂದ್ರ ಸರ್ಕಾರ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನಾ ಇಲಾಖೆಯನ್ನು ಆರಂಭಿಸಿತ್ತು. ಆ ಬಳಿಕ 2000ರಲ್ಲಿ  ಈ ಇಲಾಖೆಗೆ ಕಾಯಕಲ್ಪ ನೀಡಿ ಕೈಗಾರಿಕಾ ಅಭಿವೃದ್ಧಿ ಇಲಾಖೆಯೊಂದಿಗೆ ವಿಲೀನ ಮಾಡಲಾಯಿತು. ಈ ಹಿಂದೆ ಇದೇ ಇಲಾಖೆಯನ್ನು ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆ ಎಂದು ಕರೆಯಲಾಗುತ್ತಿತ್ತು. ಇದೀಗ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನಾ ಇಲಾಖೆ ಎಂದು ಮರು ನಾಮಕರಣ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT