ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ದೇಶ

ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ಅಂಕಿತ; ಸದ್ಯದಲ್ಲೇ ಕಾಯ್ದೆ ಜಾರಿ

ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಯಾದ ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ...

ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಯಾದ ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.
ಸದ್ಯದಲ್ಲಿಯೇ ಅದು ಕಾನೂನು ಆಗಿ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.
ಮುಸ್ಲಿಂ ಧರ್ಮದ  ವೈಯಕ್ತಿಕ ಕಾನೂನಿನಲ್ಲಿ ತ್ರಿವಳಿ ತಲಾಖ್​ ಪದ್ಧತಿಗೆ ಸಮ್ಮತಿ ಇತ್ತು. ಮೂರು ಬಾರಿ ತಲಾಖ್ ಹೇಳುವ ಮೂಲಕ ಪತ್ನಿಗೆ ವಿಚ್ಛೇದನ ಕೊಡಬಹುದಾಗಿತ್ತು. ಇಸ್ಲಾಮ್ ನ ಮೂಲ ಕಾನೂನಿನಲ್ಲಿ ತ್ರಿವಳಿ ತಲಾಖ್ ಗೆ ಬೇರೆಯೇ ವಿಧಿವಿಧಾನಗಳು ಇವೆ. ಆದರೂ ಈಗೀಗ ಈ ಕಾನೂನು ದುರ್ಬಳಕೆಯಾಗಿ ಇನ್ಸ್ ​ಟಂಟ್ ತಲಾಖ್ (ತತ್ ಕ್ಷಣವೇ ನೀಡುವ ವಿಚ್ಛೇದನ) ಆಗಿಬಿಟ್ಟಿದೆ. ಮುಸ್ಲಿಂ ಪುರುಷರು ಇದನ್ನು ದುರ್ಬಳಕೆ ಮಾಡುವುದರಿಂದ ಮದುವೆಯಾದ ಮುಸ್ಲಿಂ ಮಹಿಳೆಯರಿಗೆ ಇದರಿಂದ ತೀವ್ರ ತೊಂದರೆಯಾಗುತ್ತಿತ್ತು.
ಇದನ್ನು ಮನಗಂಡ ಕೇಂದ್ರ ಸರ್ಕಾರ ಈ ಸಾಮಾಜಿಕ ಪಿಡುಗನ್ನು ಹೊಡೆದೋಡಿಸಲು ತ್ರಿವಳಿ ತಲಾಖ್ ಮಸೂದೆಯನ್ನು ಸದನದಲ್ಲಿ ಮಂಡಿಸಿ ಅನುಮೋದನೆ ಪಡೆಯಿತು. ಇದಕ್ಕೆ ರಾಷ್ಟ್ರಪತಿಗಳ ಒಪ್ಪಿಗೆ ಕೂಡ ಸಿಕ್ಕಿದ್ದು ಇನ್ನು ಮುಂದೆ ತ್ರಿವಳಿ ತಲಾಖ್ ಹೇಳಿದರೆ ಕ್ರಿಮಿನಲ್ ಅಪರಾಧವಾಗಲಿದೆ. ಲೋಕಸಭೆಯಲ್ಲಿ ಮುಸ್ಲಿಂ ಮಹಿಳೆಯರ (ಮದುವೆಯ ಹಕ್ಕುಗಳ ರಕ್ಷಣೆ) ಮಸೂದೆ ಕಳೆದ ವಾರ ಅನುಮೋದನೆಗೊಂಡಿತ್ತು.
ಇನ್ನು ಮುಂದೆ ಮುಸಲ್ಮಾನ ಧರ್ಮದಲ್ಲಿ ಪತ್ನಿಗೆ ತ್ರಿವಳಿ ತಲಾಖ್ ಹೇಳಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ  ಆಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ