ಸಂಗ್ರಹ ಚಿತ್ರ 
ದೇಶ

10 ಸಾವಿರ ಸೈನಿಕರ ನಿಯೋಜನೆಯಾದ ಒಂದೇ ವಾರದಲ್ಲಿ ಮತ್ತೆ ಕಾಶ್ಮೀರದಲ್ಲಿ 28 ಸಾವಿರ ಸೈನಿಕರ ನಿಯೋಜನೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಅಚ್ಚರಿ ನಡೆಯನ್ನಿರಿಸಿದ್ದು, 10 ಸಾವಿರ ಸೈನಿಕರ ನಿಯೋಜಿಸಿದ್ದ ಕೇಂದ್ರಸರ್ಕಾರದ ನಡೆ ಇನ್ನೂ ಚರ್ಚೆಗೀಡಾಗುತ್ತಿರುವ ಹೊತ್ತಿನಲ್ಲೇ ಕೇವಲ ಒಂದೇ ವಾರದ ಅವಧಿಯಲ್ಲಿ ಮತ್ತೆ 28 ಸಾವಿರ ಸೈನಿಕರ ನಿಯೋಜನೆ ಮಾಡಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಅಚ್ಚರಿ ನಡೆಯನ್ನಿರಿಸಿದ್ದು, 10 ಸಾವಿರ ಸೈನಿಕರ ನಿಯೋಜಿಸಿದ್ದ ಕೇಂದ್ರಸರ್ಕಾರದ ನಡೆ ಇನ್ನೂ ಚರ್ಚೆಗೀಡಾಗುತ್ತಿರುವ ಹೊತ್ತಿನಲ್ಲೇ ಕೇವಲ ಒಂದೇ ವಾರದ ಅವಧಿಯಲ್ಲಿ ಮತ್ತೆ 28 ಸಾವಿರ ಸೈನಿಕರ ನಿಯೋಜನೆ ಮಾಡಿದೆ.
ವಾರಗಳ ಹಿಂದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ 2 ದಿನಗಳ ಕಾಶ್ಮೀರ ಭೇಟಿಯಲ್ಲಿದ್ದರು. ದೋವಲ್ ಹಿಂದಿರುಗಿದ ಬಳಿಕ ಈ ಬೆಳವಣಿಗೆಗಳು ನಡೆದಿದ್ದು, ಕುತೂಹಲ ಕೆರಳಿಸಿದೆ. ಇನ್ನು ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ಸಂಬಂಧಿಸಿದ ಕಲಂ 370 ಮತ್ತು 35ಎ ಕುರಿತಂತೆ ಭಾರಿ ವಿರೋಧ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಈ ನಡೆ ಅಚ್ಚರಿ ಮೂಡಿಸಿದೆ. ವಾರದ ಹಿಂದೆಯಷ್ಟೇ 10 ಸಾವಿರ ಅರೆಸೇನಾ ಪಡೆಗಳನ್ನು ಕಾಶ್ಮೀರಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ಮತ್ತೆ ಕಾಶ್ಮೀರಕ್ಕೆ ಮತ್ತೆ 28 ಸಾವಿರ ಸೈನಿಕರನ್ನು ಕಳುಹಿಸಲಾಗಿದೆ. 
ಆದರೆ ಇದಕ್ಕೆ ಯಾವುದೇ ಕಾರಣಗಳನ್ನು ಸೇನೆಯಾಗಲಿ, ಸರ್ಕಾರವಾಗಲಿ ನೀಡಿಲ್ಲ. ಮೂಲಗಳ ಪ್ರಕಾರ ಅಮರನಾಥ ಯಾತ್ರಾರ್ಥಿಗಳ ರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಆದರೂ ಇಷ್ಟೊಂದು ಸೈನಿಕರನ್ನುಅಮರನಾಥ ಯಾತ್ರೆಗೆ ನಿಯೋಜಿಸಿದ ಉದಾಹರಣೆಗಳೇ ಇಲ್ಲ ಎಂದು ತಿಳಿದುಬಂದಿದೆ. ಇನ್ನು ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾತುಗಳೂ ಕೇಳಿಬರುತ್ತಿದೆ.
ಇದೇ ವಿಚಾರವಾಗಿ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕರು, ಉತ್ತರ ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಸಂಖ್ಯೆ ತೀರಾ ಕಡಿಮೆ ಇದ್ದು, ಹೆಚ್ಚಿನ ಸಿಬ್ಬಂದಿಗಳ ಅಗತ್ಯವಿದೆ ಎಂದು ಹೇಳಿದ್ದಾರೆ. ಇನ್ನು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರೂ ಕೂಡ ಭೇಟಿ ನೀಡಲಿದ್ದು, ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಅಷ್ಟು ಮಾತ್ರವಲ್ಲದೆ ಇಂದು ಮತ್ತು ನಾಳೆ ಅಂದರೆ 2 ದಿನಗಳ ಕಾಲ ಕಾಶ್ಮೀರದಲ್ಲೇ ಉಳಿದು ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT