ಸುಪ್ರೀಂಕೋರ್ಟ್ (ಸಂಗ್ರಹ ಚಿತ್ರ) 
ದೇಶ

ಅಯೋಧ್ಯೆ ಭೂ ವಿವಾದ: ಇಂದು 'ಸುಪ್ರೀಂ' ನಿರ್ಧಾರ

ಅಯೋಧ್ಯೆ ರಾಮ ಜನ್ಮಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಸಾಧ್ಯತೆ ಬಗ್ಗೆ ರಚಿಸಲಾಗಿದ್ದ ಸಮಿತಿ ಸರ್ವೋಚ್ಛ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಸಂಧಾನ ಅಥವಾ ವಿಚಾರಣೆ ಮೂಲಕ ಇತ್ಯರ್ಥಪಡಿಸುವ ಕುರಿತಾದ ನಿರ್ಧಾರ ಶುಕ್ರವಾರ ಪ್ರಕಟಿಸುವ ಸಾಧ್ಯತೆಗಳಿವೆ.

ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಸಾಧ್ಯತೆ ಬಗ್ಗೆ ರಚಿಸಲಾಗಿದ್ದ ಸಮಿತಿ ಸರ್ವೋಚ್ಛ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಸಂಧಾನ ಅಥವಾ ವಿಚಾರಣೆ ಮೂಲಕ ಇತ್ಯರ್ಥಪಡಿಸುವ ಕುರಿತಾದ ನಿರ್ಧಾರ ಶುಕ್ರವಾರ ಪ್ರಕಟಿಸುವ ಸಾಧ್ಯತೆಗಳಿವೆ. 
ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳಲು ರಚಿಸಲಾಗಿದ್ದ 3 ಸದಸ್ಯರ ಸಮಿತಿ ತನ್ನ ವರದಿಯನ್ನು ನಿನ್ನೆಯಷ್ಟೇ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್'ಗೆ ಸಲ್ಲಿಸಿತ್ತು. ಈ ಅರ್ಜಿಯನ್ನು ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠವು ಇಂದು ಕೈಗೆತ್ತಿಕೊಳ್ಳಲಿದ್ದು, ವಿವಾದಕ್ಕೆ ಇತ್ಯರ್ಥಕ್ಕೆ ಸಂಧಾನ ಮಾರ್ಗವನ್ನೇ ಮುಂದುವರೆಸಬೇಕೋ ಅಥವಾ ವಿಚಾರಣೆ ಮೂಲಕ ತಾನೇ ಇತ್ಯರ್ಥ ಪಡಿಸಬೇಕೋ ಎಂಬುದನ್ನು ನಿರ್ಧರಿಸಲಿದೆ. 
ಅಯೋಧಅಯೆ ವಿವಾದವನ್ನು ಸಂವಿಧಾನದ ಮೂಲಕ ಇತ್ಯರ್ಥಪಡಿಸುವ ಕುರಿತು ವರದಿ ನೀಡಲು ನಿವೃತ್ತ ನ್ಯಾಯಮೂರ್ತಿ ಎಫ್.ಎಂ.ಖಲೀಫುಲ್ಲಾ ನೇತೃತ್ವದ ಮೂವರು ಸದಸ್ಯರ ಸಮಿತಿಯನ್ನು ಈ ಹಿಂದೆ ಸ್ವತಃ ಸುಪ್ರೀಂಕೋರ್ಟ್ ರಚಿಸಿತ್ತು. ಅದಕ್ಕೆ ವರದಿ ನೀಡಲು 3 ತಿಂಗಳು ಕಾಲಾವಕಾಶ ನೀಡಲಾಗಿತ್ತು. ಅದರಂತೆ ಸಮಿತಿ ಈ ಹಿಂದೆ ತನ್ನ ಮೊದಲ ವರದಿಯನ್ನು ಸಲ್ಲಿಸಿತ್ತು. ವರದಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದ ಸುಪ್ರೀಂಕೋರ್ಟ್ ಜು.18ರಂದು ಸಮಿತಿಗೆ ಮತ್ತಷ್ಟು ಕಾಲಾವಕಾಶ ಕಲ್ಪಿಸಿ ಜು.31ರಂದು ಸಂಧಾನದ ಸ್ಥಿತಿಗತಿ ವರದಿಯನ್ನು ತನಗೆ ಸಲ್ಲಿಸುವಂತೆ ಸೂಚಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT