ಸುಪ್ರೀಂಕೋರ್ಟ್ (ಸಂಗ್ರಹ ಚಿತ್ರ) 
ದೇಶ

ಅಯೋಧ್ಯೆ ಭೂ ವಿವಾದ: ಇಂದು 'ಸುಪ್ರೀಂ' ನಿರ್ಧಾರ

ಅಯೋಧ್ಯೆ ರಾಮ ಜನ್ಮಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಸಾಧ್ಯತೆ ಬಗ್ಗೆ ರಚಿಸಲಾಗಿದ್ದ ಸಮಿತಿ ಸರ್ವೋಚ್ಛ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಸಂಧಾನ ಅಥವಾ ವಿಚಾರಣೆ ಮೂಲಕ ಇತ್ಯರ್ಥಪಡಿಸುವ ಕುರಿತಾದ ನಿರ್ಧಾರ ಶುಕ್ರವಾರ ಪ್ರಕಟಿಸುವ ಸಾಧ್ಯತೆಗಳಿವೆ.

ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಸಾಧ್ಯತೆ ಬಗ್ಗೆ ರಚಿಸಲಾಗಿದ್ದ ಸಮಿತಿ ಸರ್ವೋಚ್ಛ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಸಂಧಾನ ಅಥವಾ ವಿಚಾರಣೆ ಮೂಲಕ ಇತ್ಯರ್ಥಪಡಿಸುವ ಕುರಿತಾದ ನಿರ್ಧಾರ ಶುಕ್ರವಾರ ಪ್ರಕಟಿಸುವ ಸಾಧ್ಯತೆಗಳಿವೆ. 
ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳಲು ರಚಿಸಲಾಗಿದ್ದ 3 ಸದಸ್ಯರ ಸಮಿತಿ ತನ್ನ ವರದಿಯನ್ನು ನಿನ್ನೆಯಷ್ಟೇ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್'ಗೆ ಸಲ್ಲಿಸಿತ್ತು. ಈ ಅರ್ಜಿಯನ್ನು ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠವು ಇಂದು ಕೈಗೆತ್ತಿಕೊಳ್ಳಲಿದ್ದು, ವಿವಾದಕ್ಕೆ ಇತ್ಯರ್ಥಕ್ಕೆ ಸಂಧಾನ ಮಾರ್ಗವನ್ನೇ ಮುಂದುವರೆಸಬೇಕೋ ಅಥವಾ ವಿಚಾರಣೆ ಮೂಲಕ ತಾನೇ ಇತ್ಯರ್ಥ ಪಡಿಸಬೇಕೋ ಎಂಬುದನ್ನು ನಿರ್ಧರಿಸಲಿದೆ. 
ಅಯೋಧಅಯೆ ವಿವಾದವನ್ನು ಸಂವಿಧಾನದ ಮೂಲಕ ಇತ್ಯರ್ಥಪಡಿಸುವ ಕುರಿತು ವರದಿ ನೀಡಲು ನಿವೃತ್ತ ನ್ಯಾಯಮೂರ್ತಿ ಎಫ್.ಎಂ.ಖಲೀಫುಲ್ಲಾ ನೇತೃತ್ವದ ಮೂವರು ಸದಸ್ಯರ ಸಮಿತಿಯನ್ನು ಈ ಹಿಂದೆ ಸ್ವತಃ ಸುಪ್ರೀಂಕೋರ್ಟ್ ರಚಿಸಿತ್ತು. ಅದಕ್ಕೆ ವರದಿ ನೀಡಲು 3 ತಿಂಗಳು ಕಾಲಾವಕಾಶ ನೀಡಲಾಗಿತ್ತು. ಅದರಂತೆ ಸಮಿತಿ ಈ ಹಿಂದೆ ತನ್ನ ಮೊದಲ ವರದಿಯನ್ನು ಸಲ್ಲಿಸಿತ್ತು. ವರದಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದ ಸುಪ್ರೀಂಕೋರ್ಟ್ ಜು.18ರಂದು ಸಮಿತಿಗೆ ಮತ್ತಷ್ಟು ಕಾಲಾವಕಾಶ ಕಲ್ಪಿಸಿ ಜು.31ರಂದು ಸಂಧಾನದ ಸ್ಥಿತಿಗತಿ ವರದಿಯನ್ನು ತನಗೆ ಸಲ್ಲಿಸುವಂತೆ ಸೂಚಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT