ಐಎಎಫ್ ಸಿ -17 
ದೇಶ

ಕಣಿವೆಯಲ್ಲಿ ಉಗ್ರರ ಭೀತಿ: ಐಎಎಫ್‌ನ ಸಿ -17 ಬಳಸಿ ಅಮರನಾಥ ಯಾತ್ರಾರ್ಥಿಗಳ ಸ್ಥಳಾಂತರ

ಅಮರನಾಥ ಯಾತ್ರಾ ಯಾತ್ರಿಕರನ್ನು ಕಾಶ್ಮೀರ ಕಣಿವೆಯಿಂದ ಜಮ್ಮು, ಪಠಾಣ್‌ಕೋಟ್ ಅಥವಾ ದೆಹಲಿಯಂತಹ ಸ್ಥಳಗಳಿಗೆ ಕಳಿಸಿ ಅವರನ್ನು ಮನೆಗೆ ಸುರಕ್ಷಿತವಾಗಿ ಹಿಂದಿರುಗಲು....

ಶ್ರೀನಗರ: ಅಮರನಾಥ ಯಾತ್ರಾ ಯಾತ್ರಿಕರನ್ನು ಕಾಶ್ಮೀರ ಕಣಿವೆಯಿಂದ ಜಮ್ಮು, ಪಠಾಣ್‌ಕೋಟ್ ಅಥವಾ ದೆಹಲಿಯಂತಹ ಸ್ಥಳಗಳಿಗೆ ಕಳಿಸಿ ಅವರನ್ನು ಮನೆಗೆ ಸುರಕ್ಷಿತವಾಗಿ ಹಿಂದಿರುಗಲು ಸಹಾಯ ಮಾಡುವಂತೆ ಕಾಶ್ಮೀರ ಸರ್ಕಾರ  ಭಾರತೀಯ ವಾಯುಪಡೆಗೆ ಮನವಿ ಮಾಡಿದೆ.
ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಅಮರನಾಥ ಯಾತ್ರಾ ಯಾತ್ರಾರ್ಥಿಗಳಿಗೆ ತಮ್ಮ ತೀರ್ಥಯಾತ್ರೆ ನಿಲ್ಲಿಸಿ ಸಾಧ್ಯವಾದಷ್ಟು ಬೇಗ ರಾಜ್ಯದಿಂದ ಹೊರಹೋಗುವಂತೆ ಸಲಹೆ ನೀಡಿದೆ. ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸೇರಿದಂತೆ ಭಯೋತ್ಪಾದಕ ಗುಂಪುಗಳು ಯಾತ್ರಾರ್ಥಿಗಳು ಮತ್ತು ರಾಜ್ಯದಲ್ಲಿನ  ಭದ್ರತಾ ಪಡೆಗಳ ವಿರುದ್ಧ ಮುಷ್ಕರ ನಡೆಸಲು ಮಾಡಿದ ಪ್ರಯತ್ನಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
"ಯಾತ್ರಾರ್ಥಿಗಳನ್ನು ತಮ್ಮ ಸಿ -17 ಸಾರಿಗೆಯಲ್ಲಿ ಕಾಶ್ಮೀರ ಕಣಿವೆಯಿಂದ ಹೊರಗೆ ಕರೆದೊಯ್ಯಲು ಐಎಎಫ್‌ಗೆ ರಾಜ್ಯ ಸರ್ಕಾರದಿಂದ ಮನವಿ ಸ್ವೀಕರಿಸಿದ್ದೇವೆ." ಸರ್ಕಾರಿ ಮೂಲಗಳು ಎಎನ್‌ಐಗೆ ತಿಳಿಸಿವೆ.
ಭಾರತೀಯ ವಾಯುಪಡೆಗೆ ಸೇರಿದ ಸಿ -17 ಗಳು ಈಗಾಗಲೇ ಕಣಿವೆಯಲ್ಲಿ ಮುನ್ನೆಚ್ಚರಿಕೆ ನಿಯೋಜನೆಗಾಗಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಅರೆಸೈನಿಕ ಪಡೆಗಳಿಗೆ ಒಂದೆಡೆ ನುಗ್ಗಲು ಅನುಕೂಲವಾಗುವಂತೆ ಂಆಡಿದೆ.ಈ ಸಿ -17 ಗ್ಲೋಬ್‌ಮಾಸ್ಟರ್  ಮೂಲಕ ಒಂದೇ ಪ್ರಯಾಣದಲ್ಲಿ ಸುಮಾರು 230 ಪ್ರಯಾಣಿಕರನ್ನು ಸ್ಥಳಾಂತರಿಸಬಹುದಾಗಿದೆ.ಇವು ರಷ್ಯಾದ ಇಲ್ಯುಶಿನ್ -76 ಗಿಂತ ಕಡಿಮೆ ಸಮಯದಲ್ಲಿ ಒಂದೆಡೆಯಿಂದ ಇನ್ನೊಂದು ಪ್ರದೇಶಕ್ಕೆ ತೆರಳುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT