ಅಪಘಾತಕ್ಕೀಡಾದ ಲಾರಿ 
ದೇಶ

ಉನ್ನಾವ್ ಪ್ರಕರಣ: ಲಾರಿ ಚಾಲಕ, ಕ್ಲೀನರ್ ಸಿಬಿಐ ವಶಕ್ಕೆ, ನಂಬರ್ ಪ್ಲೇಟ್ ಗೆ ಕಪ್ಪು ಗ್ರೀಸ್ ಬಳಿದ ಮಾಲೀಕ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಆಶಿಶ್ ಕುಮಾರ್ ಪಾಲ್ ಹಾಗೂ ಕ್ಲೀನರ್...

ಉನ್ನಾವ್: ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಆಶಿಶ್ ಕುಮಾರ್ ಪಾಲ್ ಹಾಗೂ ಕ್ಲೀನರ್ ಮೋಹನ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸಿಬಿಐ ವಶಕ್ಕೆ ನೀಡಲಾಗಿದೆ.
ಇಬ್ಬರು ಆರೋಪಿಗಳನ್ನು ಏಳು ದಿನಗಳ ಕಾಲ ತನ್ನ ವಶಕ್ಕೆ ನೀಡುವಂತೆ ಸಿಬಿಐ ಮನವಿ ಮಾಡಿತ್ತು. ಆದರೆ ವಿಶೇಷ ನ್ಯಾಯಾಧೀಶೆ ಅನುರಾಧಾ ಶುಕ್ಲಾ ಅವರು ಒಂದು ದಿನ ಮಾತ್ರ ಸಿಬಿಐ ವಶಕ್ಕೆ ನೀಡಿ ಆದೇಶಿದ್ದಾರೆ.
ಜುಲೈ 28ರಂದು ರಾಯ್ ಬರೇಲಿ ಜಿಲ್ಲೆಯಲ್ಲಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ, ಆಕೆಯ ವಕೀಲ ಹಾಗೂ ಇಬ್ಬರು ಸಂಬಂಧಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿತ್ತು. ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಅತ್ಯಾಚಾರ ಸಂತ್ರಸ್ತೆ ಹಾಗೂ ವಕೀಲ ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಈ ಮಧ್ಯೆ ಕಾರಿಗೆ ಡಿಕ್ಕೆ ಹೊಡೆದ ಲಾರಿಯ ಮಾಲೀಕ ಹಾಗೂ ವಾಹನಕ್ಕೆ ಫೈನಾನ್ಸ್ ಮಾಡಿದ ಕಾನ್ಪುರ್ ಮೂಲದ ಕಂಪನಿ ವಿಭಿನ್ನ ಹೇಳಿಕೆ ನೀಡಿದ್ದು, ಲಾರಿಯನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗಿದೆ.
ಅಪಘಾತ ನಡೆದ ಸಂದರ್ಭದಲ್ಲಿ ಟ್ರಕ್ ನ ನಂಬರ್ ಪ್ಲೇಟ್ ಅನ್ನು ಗ್ರೀಸ್ ನಿಂದ ಉಜ್ಜಿರುವುದು ಕಂಡುಬಂದಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಲಾರಿ ಮಾಲೀಕ, ತಾನು ಸಾಲದ ಕಂತನ್ನು ಕಟ್ಟಲು ವಿಫಲವಾಗಿದ್ದು, ಹಣಕಾಸು ಕಂಪನಿಯ ಸಿಬ್ಬಂದಿಯ ಕಣ್ಣುತಪ್ಪಿಸಲು ಉದ್ದೇಶಪೂರ್ವಕವಾಗಿ ನಂಬರ್ ಪ್ಲೇಟ್ ಗೆ ಗ್ರೀಸ್ ಹಾಕಲಾಗಿತ್ತು ಎಂದು ಹೇಳಿದ್ದಾರೆ. ಆದರೆ ಕಂತು ಕಟ್ಟುವಂತೆ ತಾನು ಯಾರ ಮೇಲೂ ಒತ್ತಡ ಹೇರಿಲ್ಲ. ಅವರು ಕಂತುಗಳನ್ನು ತಪ್ಪಿಸಿದ್ದಾರೆ. ಆದರೂ ಅರ್ಧ ಕಂತುಗಳನ್ನು ಪಾವತಿಸಿದ್ದಾರೆ ಎಂದು ಕಂಪನಿಯ ಏಜೆಂಟ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT