ಸಾಂದರ್ಭಿಕ ಚಿತ್ರ 
ದೇಶ

ಜನ್ಮದಿನದಂದೇ ಯುವತಿ ಅಪಹರಣ, ಗ್ಯಾಂಗ್ ರೇಪ್!

ಜನ್ಮದಿನದ ಸಂಭ್ರಮದಲ್ಲಿದ್ದ 19 ವರ್ಷದ ಯುವತಿಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮುಂಬೈ: ಜನ್ಮದಿನದ ಸಂಭ್ರಮದಲ್ಲಿದ್ದ 19 ವರ್ಷದ ಯುವತಿಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಳೆದ ಜುಲೈ 7ರಂದು ತನ್ನ ಜನ್ಮದಿನದ ಸಂಭ್ರಮದಲ್ಲಿದ್ದ ಯುವತಿ ಸ್ನೇಹಿತೆಯ ಮನೆಗೆ ತೆರಳಿ ವಾಪಸಾಗುತ್ತಿದ್ದಳು. ಈ ವೇಳೆ ಯುವತಿಯನ್ನು ಹಿಂಬಾಲಿಸಿದ್ದ ನಾಲ್ಕು ಮಂದಿ ದುಷ್ಕರ್ಮಿಗಳು ಸಮಯ ನೋಡಿ ಆಕೆಯನ್ನು ಅಪಹರಣ ಮಾಡಿದ್ದಾರೆ.
ಬಳಿಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿ ಪರಾರಿಯಾಗಿದ್ದಾರೆ. ಬಳಿಕ ಯುವತಿ ಆಘಾತದಿಂದ ಮನೆಗೆ ತೆರಳಿದ್ದು, ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ. ಅತ್ಯಾಚಾರ ನಡೆದ ದಿನದಿಂದ ನಿತ್ಯವೂ ಆಕೆ ಗೌಪ್ಯವಾಗಿ ಅಳುತಿದ್ದಳು. ಇದನ್ನು ಗಮನಿಸಿದ ಪೋಷಕರು ಆಕೆಯನ್ನು ಸಾಕಷ್ಟು ಬಾರಿ ಪ್ರಶ್ನೆ ಮಾಡಿದ್ದರಾದರೂ, ಆಕೆ ಉತ್ತರಿಸಿರಲಿಲ್ಲ. ಕೊನೆಗೆ ಆಕೆಯ ಪರಿಸ್ಥಿತಿ ಗಮನಿಸಿದ ತಾಯಿ ಬಲವಂತ ಮಾಡಿದಾಗ ಯುವತಿ ನಡೆದ ವಿಷಯ ತಿಳಿಸಿದ್ದಾಳೆ. 
ಕೂಡಲೇ ಯುವತಿ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರು ದಾಖಲಿಸಿಕೊಂಡಿರುವ ಚುನಭಟ್ಟಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ದೀಪಕ್ ವಿಜಯ್ ಸುರ್ವೆ ಅವರು ಐಪಿಸಿ ಸೆಕ್ಷನ್ 376 (ಅತ್ಯಾಚಾರ), 376D (ಸಾಮೂಹಿಕ ಅತ್ಯಾಚಾರ) and 34 (ಸಾಮಾನ್ಯ ಉದ್ದೇಶದೊಂದಿಗೆ ಹಲವಾರು ವ್ಯಕ್ತಿಗಳು ಮಾಡಿದ ಅಪರಾಧ ಕೃತ್ಯಗಳು) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂತೆಯೇ ಸಂತ್ರಸ್ಥ ಯುವತಿಯನ್ನು ಔರಂಗಾಬಾದ್ ಆಸ್ಪತ್ರೆಗೆ ರವಾನೆ ಮಾಡಿ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಈ ವೇಳೆ ಸಾಮೂಹಿಕ ಅತ್ಯಾಚಾರ ಗೈದಿರುವುದು ಸ್ಪಷ್ಟವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT