ಸಂಗ್ರಹ ಚಿತ್ರ 
ದೇಶ

ತಲಾಕ್ ಮಸೂದೆ ಅಂಗೀಕಾರಗೊಂಡಿದ್ದಕ್ಕೆ ಸಂಭ್ರಮಿಸಿದ ಮಹಿಳೆಗೆ ತಲಾಕ್ ಕೊಟ್ಟ ಪತಿ!

ಮಹಿಳೆಯರ ಹಕ್ಕು ರಕ್ಷಣೆ ಸಂಬಂಧ ರಾಜ್ಯಸಭೆಯಲ್ಲಿ ತ್ರಿವಳಿ ತಲಾಕ್ ಅಂಗೀಕಾರಗೊಂಡಿದ್ದನ್ನು ಸಂಭ್ರಮಿಸಿದ ಮಹಿಳೆಗೆ ಪತಿ ತಲಾಕ್ ನೀಡಿ ಮನೆಯಿಂದ ಹೊರ ಹಾಕಿದ್ದಾರೆ.

ಬಾಂದಾ(ಉತ್ತರಪ್ರದೇಶ): ಮಹಿಳೆಯರ ಹಕ್ಕು ರಕ್ಷಣೆ ಸಂಬಂಧ ರಾಜ್ಯಸಭೆಯಲ್ಲಿ ತ್ರಿವಳಿ ತಲಾಕ್ ಅಂಗೀಕಾರಗೊಂಡಿದ್ದನ್ನು ಸಂಭ್ರಮಿಸಿದ ಮಹಿಳೆಗೆ ಪತಿ ತಲಾಕ್ ನೀಡಿ ಮನೆಯಿಂದ ಹೊರ ಹಾಕಿದ್ದಾರೆ. 
ಉತ್ತರ ಪ್ರದೇಶದ ಫತೇಪುರ್ ನ ಬಿಂಡಕಿಯಲ್ಲಿ ಮುಫಿದಾ ಖಾತುನ್ ಎಂಬುವರು ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಅಂಗೀಕಾರ ದೊರೆತಿದ್ದಕ್ಕೆ ಸಂಭ್ರಮಿಸಿದ್ದರು. ಇದನ್ನು ನೋಡಿದ ಪತಿ ಆಗಸ್ಟ್ 3ರಂದು ತಲಾಕ್ ನೀಡಿ ಮನೆಯಿಂದ ಹೊರಹಾಕಿದ್ದಾರೆ. 
ಇದರಿಂದ ಗಾಬರಿಗೊಂಡ ಮುಫಿದಾ ತಕ್ಷಣ ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಮುಫಿದಾ ತಮ್ಮ ದೂರಿನಲ್ಲಿ ನನ್ನ ಗಂಡ ಶಂಶುದ್ದೀನ್ ಮೂರು ಬಾರಿ ತಲಾಕ್ ಹೇಳಿ ಮನೆಯಿಂದ ಹೊರ ತಳ್ಳಿದ್ದಾರೆ ಎಂದು ತಿಳಿಸಿದ್ದಾರೆ. 
ಜು.30ರಂದು ಪ್ರತಿಪಕ್ಷಗಳ ಕೆಲ ಸದಸ್ಯರು ಕಲಾಪ ಬಹಿಷ್ಕಾರ ಹಾಗೂ ಗೈರಿನ ಲಾಭ ಪಡೆದ ಬಿಜೆಪಿ ಮುಸ್ಲಿಂ ಮಹಿಳಾ ಹಕ್ಕುಗಳ ಸುರಕ್ಷತೆ ವಿಧೇಯಕಕ್ಕೆ ರಾಜ್ಯಸಭೆಯಲ್ಲಿ ಒಪ್ಪಿಗೆ ಪಡೆಯುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಯಿತು. ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ಅಂಕಿತ ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

SCROLL FOR NEXT