ನರೇಂದ್ರ ಮೋದಿ 
ದೇಶ

2024ರ ಚುನಾವಣೆ ಗೆಲುವಿಗಾಗಿ ನಕಾರಾತ್ಮಕತೆ ತೊಲಗಿಸಿ: ಬಿಜೆಪಿ ಸಂಸದರಿಗೆ ಮೋದಿ ಕಿವಿಮಾತು

ಬಿಜೆಪಿ ಸಂಸದರು ತಮ್ಮ ಪಕ್ಷಕ್ಕೆ ಮತ ಹಾಕದವರ ಬಗೆಗಿನ ನಕಾರಾತ್ಮಕ ಭಾವನೆಯನ್ನು ತೊಡೆದು ಹಾಕಿ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ತಮ್ಮ ಮತ್ತು ಪಕ್ಷ....

ನವದೆಹಲಿ: ಬಿಜೆಪಿ ಸಂಸದರು ತಮ್ಮ ಪಕ್ಷಕ್ಕೆ ಮತ ಹಾಕದವರ ಬಗೆಗಿನ ನಕಾರಾತ್ಮಕ ಭಾವನೆಯನ್ನು ತೊಡೆದು ಹಾಕಿ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ತಮ್ಮ ಮತ್ತು ಪಕ್ಷದ ಒಳಿತಿಗಾಗಿ ಕಾರ್ಯಪ್ರವೃತ್ತರಾಗುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಬಿಜೆಪಿ ಸಂಸದರಿಗೆ ಆಯೋಜಿಸಲಾಗಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ವರ ಅಭ್ಯುದಯಕ್ಕೆ ಶ್ರಮಿಸುವಂತೆ ಕರೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೆಲಸಕ್ಕೆ ಆದ್ಯತೆ ನೀಡಿದರೆ, ಬಿಜೆಪಿಗೆ ಮತಹಾಕದವರೂ ಕೂಡ ಕೇಸರಿ ಪಕ್ಷದ ಸಿದ್ಧಾಂತಗಳಿಗೆ ಹತ್ತಿರವಾಗುತ್ತಾರೆ ಎಂಬುದಾಗಿ ವಿವರಿಸಿದ್ದಾರೆ ಎಂದರು. 
ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುವಂತೆ ಶಾಸಕರನ್ನು ಒತ್ತಾಯಿಸಿದ ಪ್ರಧಾನಿ: "ನೀವೆಲ್ಲರೂ ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಬೇಕು. ನಿಮ್ಮ ಸ್ವಂತ ಆರೋಗ್ಯದ ಬಗ್ಗೆ ಗಮನಹರಿಸುವುದರ ಜೊತೆಗೆ, ನಿಮ್ಮ ಕುಟುಂಬವನ್ನು ನೋಡಿಕೊಳ್ಳಲು ನೀವು ಸ್ವಲ್ಪ ಸಮಯವನ್ನು ಸಹ ವಿನಿಯೋಗಿಸಬೇಕು" ಎಂದು ಹೇಳಿದರು.
 ತರಬೇತಿ ಕಾರ್ಯಕ್ರಮದ ಮೊದಲ ದಿನ ನೂತನವಾಗಿ ಆಯ್ಕೆಯಾದ ಬಿಜೆಪಿ ಸಂಸದರಿಗೆ ಯಶಸ್ವಿ ಸಾರ್ವಜನಿಕ ಪ್ರತಿನಿಧಿಯಾಗುವುದು ಹೇಗೆ ಎಂಬ ಬಗ್ಗೆ ಪ್ರಧಾನಿ ವಿವರಿಸಿದ್ದರು.
ಆಯಾ ಕ್ಷೇತ್ರಗಳಲ್ಲಿ ತಮ್ಮ ಯಶಸ್ಸಿಗೆ ಶ್ರಮಿಸಿದ ತಮ್ಮ ಹಿತೈಷಿಗಳ ಜೊತೆ ಸಂಪರ್ಕದಲ್ಲಿರಲು ಮೋದಿ ಸಂಸದರನ್ನು ಕೇಳಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT