ದೇಶ

ರಾಜ್ಯಸಭಾ ಸ್ಥಾನಕ್ಕೆ ಸಮಾಜವಾದಿ ಪಕ್ಷದ ನಾಯಕ ಸಂಜಯ್ ಸೇಠ್ ರಾಜೀನಾಮೆ, ಬಿಜೆಪಿ ಸೇರುವ ಸಾಧ್ಯತೆ

Lingaraj Badiger
ಲಖನೌ: ಸಮಾಜವಾದಿ ಪಕ್ಷದ ನಾಯಕ ಸಂಜಯ್ ಸೇಠ್ ಅವರು ಸೋಮವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ.
ಸಂಜಯ್ ಸೇಠ್ ಅವರು ಕಳೆದ ಒಂದು ತಿಂಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಮತ್ತು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೂರನೇ ವ್ಯಕ್ತಿಯಾಗಿದ್ದಾರೆ. ಈ ಮುಂಚೆ ನೀರಜ್ ಶೇಖರ್ ಮತ್ತು ಸುರೇಂದ್ರ ನಗರ್ ಅವರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.
ಈಗ ಸಮಾಜವಾದಿ ಪಕ್ಷದ ರಾಷ್ಟ್ರೀಯ ಖಜಾಂಚಿ ಹಾಗೂ ಯಾದವ್ ಕುಟುಂಬದ ಆಪ್ತ ಸಂಜಯ್ ಸೇಠ್ ಸಹ ರಾಜೀನಾಮೆ ನೀಡಿದ್ದಾರೆ.
ಸಂಜಯ್ ಸೇಠ್ ರಾಜೀನಾಮೆಯೊಂದಿಗೆ ರಾಜ್ಯಸಭೆಯಲ್ಲಿ ಸಮಾಜವಾದಿ ಪಕ್ಷದ ಬಲ 10ಕ್ಕೆ ಕುಸಿದಿದೆ.
SCROLL FOR NEXT