ಶಾಲಾ ವ್ಯಾನ್ ಮಗುಚಿ ಬಿದ್ದ ದೃಶ್ಯ ಮತ್ತು ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವುದು 
ದೇಶ

ಉತ್ತರಾಖಂಡದಲ್ಲಿ ಶಾಲಾ ಬಸ್ ಕಂದಕಕ್ಕೆ ಉರುಳಿ 9 ಮಕ್ಕಳು ಸಾವು

ಆಳವಾದ ಕಂದಕಕ್ಕೆ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಬಸ್ಸು ಉರುಳಿ ಬಿದ್ದ ಪರಿಣಾಮ 8 ...

ಡೆಹ್ರಾಡೂನ್: ಶಾಲಾ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 9 ಮಕ್ಕಳು ಮೃತಪಟ್ಟಿದ್ದು ಇತರ 14 ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ತೆಹ್ರಿ ಪ್ರಾಂತ್ಯದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಶಾಲಾ ವಾಹನ ಮದನ್ನೆಗಿ ಕಡೆಗೆ ಹೋಗುತ್ತಿದ್ದಾಗ ಪ್ರತಾಪ್ ನಗರ್ - ಕಂಗ್ಸಾಲಿ-ಮದನ್ ನೇಗಿ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತೆಹ್ರಿ ಜಿಲ್ಲಾಧಿಕಾರಿ ವಿ.ಷಣ್ಮುಗಮ್ ಮಾಹಿತಿ ನೀಡಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಘಟನೆಗೆ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಗಂಭೀರ ಗಾಯಗೊಂಡ ನಾಲ್ವರನ್ನು ವಿಮಾನದ ಮೂಲಕ ರಿಷಿಕೇಷದಲ್ಲಿರುವ ಏಮ್ಸ್ ಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT