ಅಮಿತ್ ಶಾ 
ದೇಶ

371ನೇ ವಿಧಿಯಲ್ಲಿ ಯಾವುದೇ ಬದಲಾವಣೆಯಿಲ್ಲ: ಅಮಿತ್ ಶಾ ಭರವಸೆ

ನಾಗಾಲ್ಯಾಂಡ್ ಸೇರಿದಂತೆ 7 ರಾಜ್ಯಗಳಿಗೆ ಸಂಬಂಧಿಸಿದ 371ನೇ ವಿಧಿಯನ್ನು ದುರ್ಬಲಗೊಳಿಸುವ ಅಥವಾ ಬದಲಾವಣೆ ಮಾಡುವ ಯಾವುದೇ ಚಿಂತನೆ....

ನವದೆಹಲಿ: ನಾಗಾಲ್ಯಾಂಡ್ ಸೇರಿದಂತೆ 7 ರಾಜ್ಯಗಳಿಗೆ ಸಂಬಂಧಿಸಿದ 371ನೇ ವಿಧಿಯನ್ನು ದುರ್ಬಲಗೊಳಿಸುವ ಅಥವಾ ಬದಲಾವಣೆ ಮಾಡುವ ಯಾವುದೇ ಚಿಂತನೆ ಕೇಂದ್ರ ಸರ್ಕಾರಕ್ಕಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ
ಲೋಕಸಭೆಯಲ್ಲಿ ಮಂಗಳವಾರ ಜಮ್ಮು ಕಾಶ್ಮೀರ ಪುನರ್ ರಚನೆ ಮತ್ತು 370ನೇ ವಿಧಿ ರದ್ದತಿ ಮಸೂದೆ ಮೇಲಿನ ಚರ್ಚೆಯ ವೇಳೆ ಈ ವಿಷಯ ತಿಳಿಸಿರುವ ಅವರು, 370 ಹಾಗೂ 371ನೇ ವಿಧಿಯ ನಡುವೆ ಸ್ಪಷ್ಟ ವ್ಯತ್ಯಾಸವಿದೆ ಎಂದರು.
“ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು 371ನೇ ವಿಧಿಗೆ ಹೋಲಿಸಿ ದೇಶವನ್ನು ತಪ್ಪುದಾರಿಗೆ ಎಳೆಯದಿರಿ, 370ನೇ ವಿಧಿಯು ತಾತ್ಕಾಲಿಕ ವ್ಯವಸ್ಥೆಯಾಗಿದೆ. ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ, ನಾಗಾಲ್ಯಾಂಡ್ ಮತ್ತು ಮಿಜೋರಾಂ ಸೇರಿದಂತೆ ಹಲವಾರು ರಾಜ್ಯಗಳೊಂದಿಗೆ ವ್ಯವಹರಿಸುವ 371ನೇ ವಿಧಿ ವಿಶೇಷ ನಿಬಂಧನೆಗಳ ಬಗ್ಗೆ ಮಾತ್ರ ಮಾತನಾಡುತ್ತದೆ” ಎಂದು ಸ್ಪಷ್ಟಪಡಿಸಿದರು
“ವಿಶೇಷವಾದ 371 ನೇ ವಿಧಿಯು ಸಂಬಂಧಪಟ್ಟ ರಾಜ್ಯಗಳಿಗೆ ನಿರ್ಧಿಷ್ಟ ಪ್ರಯೋಜನಗಳನ್ನು ಒದಗಿಸುತ್ತವೆ.  ಎರಡೂ ವಿಧಿಗಳನ್ನು ಹೋಲಿಸುವ ಅಗತ್ಯವಿಲ್ಲ ಹಾಗೂ 371ನೇ ವಿಧಿಯನ್ನು ಬದಲಿಸುವ ಯಾವುದೇ ಚಿಂತನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕಿಲ್ಲವೆಂದ ಭರವಸೆ ನೀಡುತ್ತೇನೆ” ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರಕ್ಕೆ ಕಲ್ಪಿಸಲಾಗಿದ್ದ 370ನೇ ವಿಧಿ ರದ್ದತಿಯ ಬಳಿಕ 371ನೇ ವಿಧಿಯನ್ನೂ ಬದಲಿಸುವ ಅಥವಾ ದುರ್ಬಲಗೊಳಿಸುವ ಕುರಿತು ಊಹಾಪೋಹ ಹಬ್ಬಿದ್ದರಿಂದ ನಾಗಾಲ್ಯಾಂಡ್ ಹಾಗೂ ಇನ್ನಿತರ ಈಶಾನ್ಯ ರಾಜ್ಯಗಳು ಆತಂಕಕ್ಕೆ ಒಳಗಾಗಿದ್ದವು. 
370ನೇ ವಿಧಿಯ ರದ್ದತಿಯು ಈಶಾನ್ಯ ರಾಜ್ಯಗಳಿಗೆ ಎಚ್ಚರಿಕೆಯ ಗಂಟೆಯೇ ಎಂದು ಕಾಂಗ್ರೆಸ್ ಸದಸ್ಯ ಮನೀಷ್ ತಿವಾರಿ, ಚರ್ಚೆಯ ವೇಳೆ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT