ಅಯೋಧ್ಯೆ ವಿಚಾರಣೆ: ನಿರ್ಮೋಹಿ ಅಖಾಡದಿಂದ ಹಕ್ಕು ಪ್ರತಿಪಾದನೆ, ಸುಪ್ರೀಂ ಗೆ ಮಹತ್ವದ ಮಾಹಿತಿ! 
ದೇಶ

ಅಯೋಧ್ಯೆ ವಿಚಾರಣೆ: ನಿರ್ಮೋಹಿ ಅಖಾಡದಿಂದ ಹಕ್ಕು ಪ್ರತಿಪಾದನೆ, ಸುಪ್ರೀಂ ಗೆ ಮಹತ್ವದ ಮಾಹಿತಿ!

ಅಯೋಧ್ಯೆಯ ವಿವಾದಿತ ಪ್ರದೇಶದ ಮೇಲೆ ಸಂಪೂರ್ಣ ಹಕ್ಕನ್ನು ಪ್ರತಿಪಾದಿಸಿರುವ ನಿರ್ಮೋಹಿ ಅಖಾಡ ವಿವಾದಿತ ಸ್ಥಳಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ಆ.06 ರಂದು ಮಹತ್ವದ ಮಾಹಿತಿ ನೀಡಿದೆ.

ನವದೆಹಲಿ: ಅಯೋಧ್ಯೆಯ ವಿವಾದಿತ ಪ್ರದೇಶದ ಮೇಲೆ ಸಂಪೂರ್ಣ ಹಕ್ಕನ್ನು ಪ್ರತಿಪಾದಿಸಿರುವ ನಿರ್ಮೋಹಿ ಅಖಾಡ ವಿವಾದಿತ ಸ್ಥಳಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗೆ ಆ.06 ರಂದು ಮಹತ್ವದ ಮಾಹಿತಿ ನೀಡಿದೆ. 
1934 ರಲ್ಲಿ ಮುಸ್ಲಿಮರು ಬಾಬ್ರಿ ಮಸೀದಿಯ ಜಾಗದಲ್ಲಿ ಪ್ರತಿ ದಿನ 5 ಬಾರಿ ನಮಾಜ್ ಮಾಡುವುದನ್ನು ಬಿಟ್ಟಿದ್ದರು. 1949 ರ ಡಿಸೆಂಬರ್ ವೇಳೆಗೆ ಶುಕ್ರವಾರದ ಪ್ರಾರ್ಥನೆಯನ್ನೂ ಬಿಟ್ಟು, ಆ ಜಾಗ ಪರಿತ್ಯಕ್ತವಾಗಿತ್ತು ಎಂದು ಮಾಹಿತಿ ನೀಡಿದೆ. 
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಇದ್ದ ಸಾಂವಿಧಾನಿಕ ಪೀಠಕ್ಕೆ ಮಾಹಿತಿ ಸಲ್ಲಿಸಿರುವ ನಿರ್ಮೋಹಿ ಅಖಾಡ, ವಿವಾದಿತ ಪ್ರದೇಶದ ಮೇಲೆ ತನ್ನ ಹಕ್ಕನ್ನು 1934 ರಲ್ಲೇ ಪ್ರತಿಪಾದಿಸಿದ್ದಾಗಿಯೂ, ಆ ನಂತರ 1961 ರಲ್ಲಿ ಸುನ್ನಿ ವಕ್ಫ್ ಬೋರ್ಡ್  ಆ ಜಾಗದ ಮೇಲೆ ಹಕ್ಕು ಪ್ರತಿಪಾದನೆ ಮಾಡಿತ್ತು ಎಂದು ಹೇಳಿದೆ.
1949 ರ ಡಿಸೆಂಬರ್ 22-23 ರಂದು ರಾತ್ರಿ ಮಸೀದಿಯಲ್ಲಿ ರಾಮನ ವಿಗ್ರಹಗಳನ್ನು ಸ್ಥಾಪಿಸಲಾಯಿತು ಎಂದೂ ನಿರ್ಮೋಹಿ ಅಖಾಡದ ಪರ ವಕೀಲರು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ಯಾವ ಜಾಗದಲ್ಲಿ ನಿತ್ಯ ಪ್ರಾರ್ಥನೆ ನಡೆಯುವುದಿಲ್ಲವೋ ಅದನ್ನು ಮಸೀದಿ ಎಂದು ಪರಿಗಣಿಸಲು ಸಾಧ್ಯವಿಲ್ಲ, ನಾವು 1934 ರಿಂದಲೂ ಅಯೋಧ್ಯೆಯ ವಿವಾದಿತ ಪ್ರದೇಶದ ಮೇಲೆ ಹಕ್ಕು ಪ್ರತಿಪಾದನೆ ಮಾಡುತ್ತಿದ್ದೆವೆ, ಅಲ್ಲಿ ನಮಾಜ್ ನಡೆಯುತ್ತಿರಲಿಲ್ಲ ಎಂಬುದು ನಿರ್ಮೋಹಿ ಅಖಾಡಾದ ಪರ ವಕೀಲ ಸುಶೀಲ್ ಜೈನ್ ವಾದವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT