ಕೋಟಿ ಜನರ ಸ್ಪೂರ್ತಿ ಸುಷ್ಮಾ ಸ್ವರಾಜ್: ಮಾಜಿ ಸಚಿವೆ ನಿಧನಕ್ಕೆ ಪಿಎಂ ಮೋದಿ ಸಂತಾಪ 
ದೇಶ

ಕೋಟಿ ಜನರ ಸ್ಪೂರ್ತಿ ಸುಷ್ಮಾ ಸ್ವರಾಜ್: ಮಾಜಿ ಸಚಿವೆ ನಿಧನಕ್ಕೆ ಪಿಎಂ ಮೋದಿ ಸಂತಾಪ

"ಭಾರತೀಯ ರಾಜಕಾರಣದಲ್ಲಿ ಒಂದು ಅದ್ಭುತ ಅಧ್ಯಾಯವು ಕೊನೆಗೊಂಡಿದೆ.ಸಾರ್ವಜನಿಕ ಸೇವೆಗಾಗಿ ಮತ್ತು ಬಡವರ ಜೀವನವನ್ನು ಉತ್ತಮಗೊಳಿಸಲು ತನ್ನ ಜೀವನವನ್ನು ಮುಡಿಪಾಗಿಟ್ಟ ಗಮನಾರ್ಹ ನಾಯಕಿಯ....

"ಭಾರತೀಯ ರಾಜಕಾರಣದಲ್ಲಿ ಒಂದು ಅದ್ಭುತ ಅಧ್ಯಾಯವು ಕೊನೆಗೊಂಡಿದೆ.ಸಾರ್ವಜನಿಕ ಸೇವೆಗಾಗಿ ಮತ್ತು ಬಡವರ ಜೀವನವನ್ನು ಉತ್ತಮಗೊಳಿಸಲು ತನ್ನ ಜೀವನವನ್ನು ಮುಡಿಪಾಗಿಟ್ಟ ಗಮನಾರ್ಹ ನಾಯಕಿಯ ನಿಧನಕ್ಕೆ ಭಾರತ ದುಃಖಿಸುತ್ತಿದೆ." ಎಂದು ಪ್ರಧಾನಿ ನರೇಂದ್ರ ಮೋದಿ ಸುಷ್ಮಾ ಸ್ವರಾಜ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. 
"ಸುಷ್ಮಾ ಸ್ವರಾಜ್ ಕೋಟ್ಯಾಂತರ ಜನರಿಗೆ ಸ್ಫೂರ್ತಿಯ ಮೂಲವಾಗಿದ್ದರು ಸುಷ್ಮಾ  ಅವರು ಅತ್ಯುತ್ತಮ ಸಂಸದೆಯಾಗಿದ್ದರು. ಅವರ ಪಕ್ಷ, ಹಾಗೂ ಅದರ ಆಚೆಗೂ ಸಹ ಮೆಚ್ಚುಗೆ ಪಡೆದರು ಮತ್ತು ಗೌರವಿಸಲ್ಪಟ್ಟರು. ಬಿಜೆಪಿಯ ಸಿದ್ಧಾಂತ ಮತ್ತು ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ಅವರು ರಾಜಿಯಾಗುತ್ತಿರಲಿಲ್ಲ. ಪಕ್ಷದ ಬೆಳವಣಿಗೆಗೆ ಅವರ ಕೊಡುಗೆ ಅಪಾರವಾದದ್ದು. "
ಅವರ ಕೌಶಲ್ಯ ಮತ್ತು ಸಂಕಷ್ಟದಲ್ಲಿರುವ ಭಾರತೀಯರಿಗೆ ಸಹಾಯ ಮಾಡುವ ಸಾಮರ್ಥ್ಯದ  ಬಗೆಗೆ ಹೇಳಿದ ಮೋದಿ , "ಅತ್ಯುತ್ತಮ ಆಡಳಿತಾಧಿಕಾರಿ, ಸುಷ್ಮಾ ಅವರು  ನಿರ್ವಹಿಸಿದ ಪ್ರತಿಯೊಂದು ಜವಾಬ್ದಾರಿಯೂ  ಉನ್ನತ ಗುಣಮಟ್ಟದ್ದಾಗಿತ್ತು. ಹಾಗೂ ಅವರು ಅದರಲ್ಲಿ ಅತ್ಯ್ನ್ನತ ಕಾಳಜಿಯನ್ನು, ಶ್ರದ್ದೆಯನ್ನೂ ಹೊಂದಿದ್ದರು. ವಿವಿಧ ರಾಷ್ಟ್ರಗಳೊಂದಿಗಿನ ಭಾರತ ಸಂಬಂಧಗಳನ್ನು ಉತ್ತಮಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಸಚಿವರಾಗಿ ನಾವು  ಆಕೆಯ ಸಹಾನುಭೂತಿಯ ಮುಖವನ್ನು ಕಂಡಿದ್ದೇವೆ. ವಿಶ್ವದ ಯಾವುದೇ ಭಾಗದಲ್ಲಿ ಸಂಕಷ್ಟದಲ್ಲಿರುವ ಭಾರತೀಯರ ಪಾಲಿಗೆ ಸುಷ್ಮಾ ಅವರು ಸಹಾಯ ನೀಡದಿರುತ್ತಿರಲಿಲ್ಲ" ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಪಶ್ಚಿಮ ಬಂಗಾಳ: ದೇವಸ್ಥಾನ ಸಮೀಪದ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ: 7 ಯಾತ್ರಿಕರು ಸಜೀವ ದಹನ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನನ್ ಕಾರನ್ನೇ ನಿಲ್ಲಿಸ್ತೀಯಾ?': ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ, JDS ನಾಯಕನ ಬಂಧನ, Video