ದೇಶ

ಶ್ರೀನಗರದಲ್ಲಿ ಗುಲಾಂ ನಬಿ ಆಜಾದ್‌ಗೆ ತಡೆ, ಬಲವಂತವಾಗಿ ಹಿಂದಕ್ಕೆ ಕಳುಹಿಸಲಾಗಿದೆ: ಕಾಂಗ್ರೆಸ್

Vishwanath S
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಲಾಗಿದ್ದು ಇದನ್ನು ತೀವ್ರವಾಗಿ ಕಾಂಗ್ರೆಸ್ ವಿರೋಧಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಶ್ರೀನಗರದಲ್ಲಿ ಪ್ರತ್ಯಕ್ಷರಾಗಿದ್ದು ಅವರನ್ನು ತಡೆದು ಹಿಂದಕ್ಕೆ ಕಳುಹಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಸದ್ಯದ ಪರಿಸ್ಥಿತಿಯನ್ನು ತಿಳಿಯಲು ಗುಲಾಂ ನಬಿ ಆಜಾದ್ ಶ್ರೀನಗರಕ್ಕೆ ತೆರಳಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಅವರನ್ನು ಆಡಳಿತಾಧಿಕಾರಿಗಳು ತಡೆದು ನಂತರ ಅವರನ್ನು ಮತ್ತೊಂದು ವಿಮಾನದಲ್ಲಿ ಹಿಂದಕ್ಕೆ ಕಳುಹಿಸಲಾಗಿದೆ. 
SCROLL FOR NEXT