ರಕ್ಷಣಾ ಕಾರ್ಯ 
ದೇಶ

ಮಹಾರಾಷ್ಟ್ರ: ಸಾಂಗ್ಲಿಯಲ್ಲಿ ರಕ್ಷಣಾ ಬೋಟ್ ಮುಳುಗಿ 9 ಸಾವು, ನಾಲ್ವರು ನಾಪತ್ತೆ

ಮಹಾರಾಷ್ಟ್ರದ ಪ್ರವಾಹ ಪೀಡಿತ ಸಾಂಗ್ಲಿ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಬೋಟ್ ಮುಳುಗಿ 9 ಮಂದಿ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.

ಸಾಂಗ್ಲಿ: ಮಹಾರಾಷ್ಟ್ರದ ಪ್ರವಾಹ ಪೀಡಿತ ಸಾಂಗ್ಲಿ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಬೋಟ್ ಮುಳುಗಿ 9 ಮಂದಿ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.
ಭಾರೀ ಪ್ರವಾಹಕ್ಕೆ ಸಿಲುಕಿದ್ದ ಜನರನ್ನು ರಕ್ಷಿಸಲು ತೆರಳಿದ್ದ ಬೋಟ್ ಮುಳುಗಿದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಾಸಗಿ ರಕ್ಷಣಾ ಬೋಟ್ ನಲ್ಲಿ 30ಕ್ಕೂ ಹೆಚ್ಚು ಜನರನ್ನು ಕರೆತರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಪುಣೆ ವಿಭಾಗೀಯ ಆಯುಕ್ತ ದೀಪಕ್ ಮೈಸೇಕರ್ ಅವರು ಹೇಳಿದ್ದಾರೆ.
ಇದುವರೆಗೆ 9 ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಸೋಲಾಪುರ್, ಸಾಂಗ್ಲಿ, ಸತಾರಾ, ಕೊಲ್ಲಾಪುರ್ ಮತ್ತು ಪುಣೆಯಲ್ಲಿ 1.4 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಬುಧವಾರ ಗೋವಾದಿಂದ ಎನ್ ಡಿಆರ್ ಎಫ್ ಸಿಬ್ಬಂದಿ ಹಾಗೂ ಮಹಾರಾಷ್ಟ್ರದ ನೌಕಾಪಡೆ ಸಿಬ್ಬಂದಿಗಳು ಆಗಮಿಸಿದ್ದು, ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿರುವುದಾಗಿ ವರದಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT