ನೀರಿಗೆ ತಳ್ಳಿದ ಕಾರು 
ದೇಶ

ಅಪ್ಪ ಜಾಗ್ವಾರ್​ ಕಾರು ಕೊಡಿಸಲಿಲ್ಲ ಎಂದು ಹೊಸ ಬಿಎಂಡಬ್ಲ್ಯು ಕಾರನ್ನೇ ನದಿಗೆ ತಳ್ಳಿದ ಪುತ್ರ!

ಪೋಷಕರು ತನ್ನ ಇಷ್ಟಕ್ಕೆ ವಿರುದ್ಧವಾಗಿ ಗಿಫ್ಟ್ ನೀಡಿದ್ದ ಹೊಸ ಬಿಎಂಡಬ್ಲ್ಯು ಕಾರನ್ನೇ ಯುವಕನೊಬ್ಬ ನದಿಗೆ ತಳ್ಳಿದ ಘಟನೆ ಹರಿಯಾಣದಲ್ಲಿ ನಡೆದಿದೆ.

ಚಂಡೀಗಢ: ಪೋಷಕರು ತನ್ನ ಇಷ್ಟಕ್ಕೆ ವಿರುದ್ಧವಾಗಿ ಗಿಫ್ಟ್ ನೀಡಿದ್ದ ಹೊಸ ಬಿಎಂಡಬ್ಲ್ಯು ಕಾರನ್ನೇ ಯುವಕನೊಬ್ಬ ನದಿಗೆ ತಳ್ಳಿದ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣದ ಯಮುನಾನಗರದ ಯುವಕ ಈ ಕೃತ್ಯ ಎಸಗಿದ್ದು, ಈ ಯುವಕ ಜಾಗ್ವಾರ್​ ಕಂಪನಿಯ ಐಷಾರಾಮಿ ಕಾರು ಕೊಡಿಸುವಂತೆ ಪೋಷಕರಿಗೆ ಬೇಡಿಕೆ ಇಟ್ಟಿದ್ದ. ಆದರೆ ತಂದೆ ಜಾಗ್ವರ್ ಬದಲು ಬಿಎಂಡಬ್ಲ್ಯು ಕಾರು ಗಿಫ್ಟ್ ಕೊಡಿಸಿದ್ದರು. ಇದರಿಂದ ಆಕ್ರೋಶಗೊಂಡ ಯುವಕ ಅಪ್ಪ ಕೊಡಿಸಿದ ಬಿಎಂಡಬ್ಲ್ಯು ಐಷಾರಾಮಿ ಕಾರನ್ನು ನದಿಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೋರೂಂನಿಂದ ಕಾರನ್ನು ಪಡೆದುಕೊಂಡು ಮನೆಗೆ ತಂದ ಯುವಕ ಬಳಿಕ ಅದನ್ನು ಚಲಾಯಿಸಿಕೊಂಡು ಹೋಗಿ ಉಕ್ಕಿ ಹರಿಯುತ್ತಿದ್ದ ನದಿಯೊಳಗೆ ನೂಕಿದ್ದಾನೆ. ಅಲ್ಲದೆ ತನ್ನ ಈ ಕೃತ್ಯವನ್ನು ಮೊಬೈಲ್​ ಫೋನ್​ನಲ್ಲಿ ಸೆರೆಹಿಡಿದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ವಿಡಿಯೋ ಇದೀಗ ವೈರಲ್​ ಆಗಿದೆ.

ಕಾರು ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಬದಲು ನದಿಯಲ್ಲಿ ಬೆಳೆದಿದ್ದ ಗಿಡಗಂಟಿಗಳಲ್ಲಿ ಸಿಲುಕಿಕೊಂಡಿತು. ಈ ಸಂದರ್ಭದಲ್ಲಿ ಯುವಕನಿಗೆ ಜ್ಞಾನೋದಯವಾಯಿತು ಅನಿಸುತ್ತದೆ. ತಕ್ಷಣವೇ ಆತ ನುರಿತ ಮುಳುಗುತಜ್ಞರ ಸಹಾಯದಿಂದ ಕಾರನ್ನು ಮೇಲೆತ್ತಲು ಪ್ರಯತ್ನಿಸಿದ್ದಾನೆ. ಆದರೆ, ಅದು ಸಾಧ್ಯವಾಗಿಲ್ಲ. ಸದ್ಯ ಪೊಲೀಸರು ಯುವಕನ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT