ಕೇರಳದಲ್ಲಿ ಒಂದಿಡೀ ಗ್ರಾಮವನ್ನೇ ನುಂಗಿದ ಮಳೆ! 
ದೇಶ

Watch Video: ಕೇರಳದಲ್ಲಿ ಒಂದಿಡೀ ಗ್ರಾಮವನ್ನೇ ನುಂಗಿದ ಮಳೆ! 6 ಶವಗಳ ಪತ್ತೆ, ಮಿಕ್ಕವರಿಗಾಗಿ ಶೋಧ

ದೇವಾಲಯ, ಮಸೀದಿ, ಅಂಚೆ ಕಚೇರಿ ಮತ್ತು ಪ್ಲಾಂಟೇಶನ್ ಕಂಪನಿಯ ಕ್ಯಾಂಟೀನ್‌ನೊಂದಿಗೆ ಸುಮಾರು 100 ಎಕರೆ ಚಹಾ ಎಸ್ಟೇಟ್ ಜಮೀನು- ಹೀಗೆ ನ್ನಾ ಜನವಸತಿ ಪ್ರದೇಶಗಳನ್ನು ಒಳಗೊಂಡಿದ್ದ....

ವೈನಾಡು: ದೇವಾಲಯ, ಮಸೀದಿ, ಅಂಚೆ ಕಚೇರಿ ಮತ್ತು ಪ್ಲಾಂಟೇಶನ್ ಕಂಪನಿಯ ಕ್ಯಾಂಟೀನ್‌ನೊಂದಿಗೆ ಸುಮಾರು 100 ಎಕರೆ ಚಹಾ ಎಸ್ಟೇಟ್ ಜಮೀನು- ಹೀಗೆ ನ್ನಾ ಜನವಸತಿ ಪ್ರದೇಶಗಳನ್ನು ಒಳಗೊಂಡಿದ್ದ ಕೇರಳದ ಪುದುಮಲೈ ಗ್ರಾಮವು ಗುರುವಾರ ನೀರಿನಲ್ಲಿ ಸಂಪೂರ್ಣ ಜಲಸಮಾಧಿಯಾಗಿದೆ. ಸುಂದರ ವೈನಾಡಿನ ಬೆಟ್ಟ ಪ್ರದೇಶದ ಪಟ್ಟಣ ಮೆಪ್ಪಾಡಿಯಿಂದ 11 ಕಿ.ಮೀ ದೂರದಲ್ಲಿದ್ದ ಈ ಗ್ರಾಮ ಕೇರಳದಲ್ಲಿ ವರುಣನ ರುದ್ರ ನರ್ತನಕ್ಕೆ ಆಹುತಿಯಾಗಿದೆ.
ಭೂಕುಸಿತದಿಂದ ಬದುಕುಳಿದ ಗ್ರಾಮಸ್ಥರೊಬ್ಬರು ಹೇಳಿದಂತೆ "ಪುದುಮಲೈಗ್ರಾಮ ಇನ್ನು ನೆನಪು ಮಾತ್ರ!" ಶುಕ್ರವಾರ ಇಲ್ಲಿ ನಡೆದ ರಕ್ಷಣಾ ಕಾರ್ಯಾಚರಣೆ ವೇಳೆ ಆರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಆದರೆ ಇನ್ನೂ 15-20 ಜನ ಕೆಸರಿನಡಿ ಸಿಕ್ಕಿಕೊಂಡಿದ್ದಾರೆಂದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಹ್ಯಾರಿಸನ್ಸ್ ಮಲಯಾಳಂ ಒಡೆತನದ 100 ಎಕರೆ ಚಹಾ ಎಸ್ಟೇಟ್ ಇಲ್ಲಿತ್ತು. ನೂರಾರು ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು. 
ಕಣ್ಣೂರಿನಿಂದ ಆಗಮಿಸಿದ ಸೇನಾ ತಂಡ ಸೇರಿದಂತೆ 80 ಸದಸ್ಯರ ರಕ್ಷಣಾ ಪಡೆ ನೇತೃತ್ವದ ಶೋಧ ಕಾರ್ಯಾಚರಣೆ ಶುಕ್ರವಾರ ಮುಂಜಾನೆ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ಕೂಡ ರಕ್ಷಣಾ ಕಾರ್ಯಗಳಿಗಾಗಿ ಇಲ್ಲಿಗೆ ಆಗಮಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT