ಸಂಗ್ರಹ ಚಿತ್ರ 
ದೇಶ

ಥಾರ್ ಎಕ್ಸ್ ಪ್ರೆಸ್ ರೈಲು ಸೇವೆಗೆ ತಡೆ; 'ಸತ್ಯ ಒಪ್ಪಿಕೊಳ್ಳಲೇ ಬೇಕಾದ ಪರಿಸ್ಥಿತಿ ಬಂದಿದೆ': ಪಾಕ್ ಗೆ ಭಾರತ ಖಡಕ್ ತಿರುಗೇಟು

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿಯನ್ನು ಭಾರತ ಸರ್ಕಾರ ರದ್ದು ಮಾಡಿದ ಬೆನ್ನಲ್ಲೇ ಇದನ್ನು ವಿರೋಧಿಸಿ ಪಾಕಿಸ್ತಾನ ಹೂಡುತ್ತಿರುವ ವಿವಿಧ ತಂತ್ರಗಾರಿಕೆಗಳಿಗೆ ಅದೇ ಧಾಟಿಯಲ್ಲೇ ಭಾರತ ಕೂಡ ತಿರುಗೇಟು ನೀಡಿದೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿಯನ್ನು ಭಾರತ ಸರ್ಕಾರ ರದ್ದು ಮಾಡಿದ ಬೆನ್ನಲ್ಲೇ ಇದನ್ನು ವಿರೋಧಿಸಿ ಪಾಕಿಸ್ತಾನ ಹೂಡುತ್ತಿರುವ ವಿವಿಧ ತಂತ್ರಗಾರಿಕೆಗಳಿಗೆ ಅದೇ ಧಾಟಿಯಲ್ಲೇ ಭಾರತ ಕೂಡ ತಿರುಗೇಟು ನೀಡಿದೆ.

370ನೇ ವಿಧಿಯನ್ನು ಭಾರತ ಸರ್ಕಾರ ರದ್ದು ಮಾಡಿದ ಬೆನ್ನಲ್ಲೇ ಇದನ್ನು ವಿರೋಧಿಸಿ ಸಂಜೋತಾ ಎಕ್ಸ್ ಪ್ರೆಸ್ ರೈಲು ಸ್ಥಗಿತಗೊಳಿಸಿದ್ದ ಪಾಕಿಸ್ತಾನ ಇದೀಗ ಥಾರ್ ಎಕ್ಸ್‌ ಪ್ರೆಸ್‌ ರೈಲು ಸೇವೆಯನ್ನೂ ಸ್ಥಗಿತಗೊಳಿಸಿದೆ. ಇದೀಗ ಪಾಕಿಸ್ತಾನದ ಈ ನಡೆಗೆ ಭಾರತ ಖಡಕ್ ತಿರೇಗೇಟು ನೀಡಿದ್ದು, ಪಾಕಿಸ್ತಾನ ಜಗತ್ತಿನ ಮುಂದೆ ಸತ್ಯ ಒಪ್ಪಿಕೊಳ್ಳಲೇ ಬೇಕಾದ ಪರಿಸ್ಥಿತಿ ಬಂದಿದೆ ಎಂದು ತಿರುಗೇಟು ನೀಡಿದೆ. 

ಅಂತೆಯೇ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸ್ಪಷ್ಟಪಡಿಸಿರುವ ಭಾರತ, ಪಾಕಿಸ್ತಾನದ ಈ ನಿರ್ಧಾರ ಏಕಪಕ್ಷೀಯ ಎಂದು ಕಿಡಿಕಾರಿದೆ. ಅಂತೆಯೇ ಈ ಕುರಿತಂತೆ ನಮ್ಮ ಜತೆ ಮಾತನಾಡದೆಯೇ ಅವರು  ನಿರ್ಧಾರ ಕೈಗೊಂಡಿದ್ದಾರೆ. ಈ ನಿರ್ಧಾರ ಬಗ್ಗೆ  ಅವಲೋಕನ ನಡೆಸುವಂತೆ ನಾವು ಮನವಿ ಮಾಡಿದ್ದೇವೆ ಎಂದು ಭಾರತದ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ಸಂಜೋತಾ ಎಕ್ಸ್‌ ಪ್ರೆಸ್ ರದ್ದು ಮಾಡುವುದರ ಜೊತೆಗೆ ಪಾಕ್ ನಲ್ಲಿ ಬಾಲಿವುಡ್ ಸಿನಿಮಾ ಪ್ರದರ್ಶನಕ್ಕೂ ಆಗಸ್ಟ್ 8ರಂದು ತಡೆಯೊಡ್ಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT