ದೇಶ

ಭೀಕರ ಪ್ರವಾಹ: ಬಾಲಕಿಯರನ್ನು1.5  ಕಿ.ಮೀ ದೂರ ಭುಜದ ಮೇಲೆ ಹೊತ್ತು ಸಾಗಿದ ಕಾನ್ಸ್ ಟೇಬಲ್! ವಿಡಿಯೋ

ಭೀಕರ ಪ್ರವಾಹದಲ್ಲಿ ಸಿಲುಕಿದ ಇಬ್ಬರು ಹೆಣ್ಣು ಮಕ್ಕಳನ್ನು ಪೊಲೀಸ್ ಕಾನ್ಸ್ ಟೇಬಲ್ ತನ್ನ ಹೆಗಲ ಮೇಲೆ ಹೊತ್ತು ಸಾಗುವ ಮೂಲಕ ಅವರ ಜೀವ ಉಳಿಸಿದ್ದಾರೆ.

ಮೊರ್ಬಿ:  ದೇಶದ ವಿವಿಧೆಡೆ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಅಪಾರ ಪ್ರಮಾಣದ ಜೀವ, ಆಸ್ತಿಪಾಸ್ತಿ ನಷ್ಟ ಉಂಟಾಗುತ್ತಿದೆ.

ಪ್ರಕೃತಿಯ ರೌದ್ರವತಾರದಿಂದಾಗಿ ಮಹಿಳೆಯರು, ಮಕ್ಕಳು, ವೃದ್ಧರು ಮನೆ ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದು, ತೀವ್ರ ತೊಂದರೆ ಅನುಭವಿಸುವಂತಾಗಿದೆ. ಪ್ರವಾಹದ ಹೊಡೆತಕ್ಕೆ ಸಿಲುಕಿರುವ ಗುಜರಾತಿನಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. 

ಭೀಕರ ಪ್ರವಾಹದಲ್ಲಿ ಸಿಲುಕಿದ ಇಬ್ಬರು ಹೆಣ್ಣು ಮಕ್ಕಳನ್ನು ಪೊಲೀಸ್ ಕಾನ್ಸ್ ಟೇಬಲ್ ತನ್ನ ಹೆಗಲ ಮೇಲೆ ಹೊತ್ತು ಸಾಗುವ ಮೂಲಕ ಅವರ ಜೀವ ಉಳಿಸಿದ್ದಾರೆ.

ಮೊರ್ಬಿ ಜಿಲ್ಲೆಯ ಕಲ್ಯಾಣಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಗರದಂತಿದ್ದ ಪ್ರವಾಹ ನೀರಿನಲ್ಲಿ ಸಿಲುಕಿ ಭಯಭೀತಗೊಂಡಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ಭುಜದ ಮೇಲೆ ಕುಳ್ಳಿರಿಸಿಕೊಂಡು ಗುಜರಾತ್ ಪೊಲೀಸ್ ಕಾನ್ಸ್ ಟೇಬಲ್ ಪೃಥ್ವಿರಾಜ್ ಜಡೇಜಾ ಸುಮಾರು ಒಂದೂವರೆ ಕಿ.ಮೀ. ದೂರ  ಸುರಕ್ಷಿತವಾಗಿ ಹೊತ್ತು ಸಾಗಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೃಥ್ವಿರಾಜ್ ಜಡೇಜಾ ಅವರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT