ಪನಾಮರಂ ಪರಿಹಾರ ಶಿಬಿರ 
ದೇಶ

ಕೇರಳ ಪ್ರವಾಹ: ವಯನಾಡ್ ಪುನರ್ವಸತಿ ಕೇಂದ್ರದಲ್ಲಿ ವಿಷ ಆಹಾರ ಸೇವನೆ: 30 ಮಂದಿ ಸಂತ್ರಸ್ಥರು ಅಸ್ವಸ್ಥ

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕೇರಳದ ನಿರಾಶ್ರಿತ ಶಿಬಿರದಲ್ಲಿ ವಿಷಾಹಾರ ಸೇವಿಸಿ 30ಕ್ಕೂ ಹೆಚ್ಚು ಮಂದಿ ಸಂತ್ರಸ್ಥರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ವಯನಾಡ್: ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕೇರಳದ ನಿರಾಶ್ರಿತ ಶಿಬಿರದಲ್ಲಿ ವಿಷಾಹಾರ ಸೇವಿಸಿ 30ಕ್ಕೂ ಹೆಚ್ಚು ಮಂದಿ ಸಂತ್ರಸ್ಥರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಪ್ರವಾಹ ಪೀಡಿತ ಕೇರಳದ ವಯನಾಡ್ ಜಿಲ್ಲೆಯ ನಿರ್ವಾರಂ ಹೈಯರ್ ಸೆಕೆಂಡರಿ ಶಾಲೆಯಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ವಿಷಯುಕ್ತ ಆಹಾರ ಸೇವಿಸಿ 30  ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾಗಿರುವ ಜನರನ್ನು ಮಾನಂತವಾಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಲಯಾಳಂ ಮನೋರಮಾ ಪತ್ರಿಕೆ ವರದಿ ಮಾಡಿದೆ.

ಇನ್ನು ಪುನವರ್ಸತಿ ಕೇಂದ್ರದಲ್ಲಿನ ವಿಷಯುಕ್ತ ಆಹಾರಕ್ಕೆ ಕಾರಣ ತಿಳಿದುಬಂದಿಲ್ಲ. ಈ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಿರಾಶ್ರಿತ ಶಿಬಿರದಲ್ಲಿನ ಎಲ್ಲರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

ಇನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಲಿದ್ದಾರೆ.  ಭೂಕುಸಿತ ಮತ್ತು ಮಹಾಮಳೆಗೆ ಇಲ್ಲಿಯವರೆಗೆ 76 ಮಂದಿ ಪ್ರಾಣ ಕಳೆದುಕೊಂಡಿದ್ದು ನಾಪತ್ತೆಯಾದವರ ಸಂಖ್ಯೆ 58 ಆಗಿದೆ ಎಂದು ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ. ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ವಿಡಿಯೊ ಸಂವಾದ ನಡೆಸಿ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಅರಿತುಕೊಳ್ಳುತ್ತಿದ್ದರು ಪಿಣರಾಯಿ.  ಕೇರಳದಲ್ಲಿ 1654 ಪುನರ್ವಸತಿ ಕೇಂದ್ರಗಳಿದ್ದು 2,87,585 ಮಂದಿ ಆಶ್ರಯ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ'.. 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಾರೆ': ನಟಿ ಆಕ್ರೋಶ! VIDEO

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಕ್ರಿಕೆಟಿಗ, ಕನ್ನಡಿಗ Vaishak Vijayakumar, ಹುಡುಗಿ ಯಾರು ಗೊತ್ತಾ? Video

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI vs ಇಂಗ್ಲೆಂಡ್; ಕೋಚ್ ಗೌತಮ್ ಗಂಭೀರ್‌ಗೆ ಕಠಿಣ ಸವಾಲು

SCROLL FOR NEXT